ತಾಳಿ ಕಟ್ಟಲು ಮುಂದಾದ ವರನಿಗೆ ಶಾಕ್: ಅದಾಗಲೇ ಯುವತಿಯ ಕೊರಳಲ್ಲಿತ್ತು ತಾಳಿ. ಮುಂದೇನಾಯಿತು ?
Team Udayavani, Dec 8, 2019, 2:13 PM IST
ಲಕ್ನೋ: ಮದುವೆಗೆ ವರ ತಡವಾಗಿ ಬಂದಿದ್ದಕ್ಕೆ ಬೇಸರಗೊಂಡ ವಧುವಿನ ಕುಟುಂಬಸ್ಥರು ಬೇರೊಬ್ಬನ ಜೊತೆ ವಿವಾಹವನ್ನು ಸಾಂಗವಾಗಿ ನೆರವೇರಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ನಿಶ್ಚಯವಾಗಿದ್ದ ಮದುವೆಗೆ ವರ ತಡವಾಗಿ ಬಂದಿದ್ದು, ಈ ವೇಳೆ ವಧುವಿನ ಕೊರಳಲ್ಲಿ ಮಾಂಗಲ್ಯ ಸರ ಕಂಡು ಕಂಗಾಲಾಗಿದ್ದಾನೆ. ಈ ಬಗ್ಗೆ ಯುವತಿಯ ಕುಟುಂಬಸ್ಥರಲ್ಲಿ ಪ್ರಶ್ನಿಸಿದಾಗ ತುಂಬಾ ಸಮಯ ಕಾದರೂ ವರನ ಕಡೆಯವರು ಯಾರು ಬರಲಿಲ್ಲವಾದ್ದರಿಂದ ಬೇರೊಬ್ಬನ ಜೊತೆ ವಿವಾಹ ಮಾಡಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.
ಆದದ್ದೇನು ?
ಉತ್ತರ ಪ್ರದೇಶದ ಬಿಜ್ನೋರ್ನ ಮದುವೆ ಮಂಟಪದಲ್ಲಿ ವಿವಾಹಕ್ಕೆ ಸಿದ್ದತೆ ನಡೆದಿತ್ತು. ಮಂಟಪ ಕೂಡ ಜನರಿಂದ ತುಂಬಿ ತುಳುಕುತ್ತಿತ್ತು. ಆದರೆ ಮುಖ್ಯವಾಗಿ ಮದುವೆ ಗಂಡು ಮತ್ತು ಆತನ ಕುಟುಂಬಸ್ಥರು ಇನ್ನೂ ಬಂದಿರಲಿಲ್ಲ. ವಧುವಿನ ಕಡೆಯವರು ತುಂಬಾ ಸಮಯ ಕಾದರೂ ಸಹ ವರನ ಕಡೆಯವರು ಮದುವೆ ಮಂಟಪಕ್ಕೆ ಬರಲೇ ಇಲ್ಲ.
ಕಾದು ಕಾದು ಸುಸ್ತಾಗಿ ವಧು ಮದುವೆ ನಿಶ್ಚಯವಾಗಿದ್ದ ಹುಡುಗನನ್ನು ತಿರಸ್ಕರಿಸಿ, ಕೊನೆಗೆ ಅದೇ ಮಂಟಪದಲ್ಲಿ, ಅದೇ ಮುಹೂರ್ತದಲ್ಲಿ ಬೇರೆ ಹುಡುಗನನ್ನು ಮದುವೆಯಾಗಿದ್ದಾಳೆ. ಈ ವೇಳೆ ವರನ ಕಡೆಯಯವರು ಹೆಚ್ಚಿನ ವರದಕ್ಷಿಣೆಯಾಗಿ ಬೈಕ್ ಮತ್ತು ಹಣ ಕೇಳಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ನಾವು ಅಷ್ಟು ಹಣ ಕೊಡುವ ಸ್ಥಿತಿಯಲ್ಲಿ ಇರಲಿಲ್ಲ. ಅದ್ದರಿಂದ ಬೇರೊಬ್ಬನ ಜೊತೆ ವಿವಾಹ ನೆರವೇರಿಸಿದ್ದೇವೆ ಎಂದು ಯುವತಿಯ ಕಡೆಯವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ