Hyderabad: ಬಿರಿಯಾನಿ ಜೊತೆ ರಾಯಿತಾ ಕೇಳಿದ್ದಕ್ಕೆ ಥಳಿತ; ಗ್ರಾಹಕ ಮೃತ್ಯು
ಪೊಲೀಸ್ ಠಾಣೆ ಬಳಿಯೇ ಕುಸಿದ ಗ್ರಾಹಕ
Team Udayavani, Sep 11, 2023, 5:32 PM IST
ಹೈದರಾಬಾದ್: ಗ್ರಾಹಕ ಮತ್ತು ಹೋಟೆಲ್ ಸಿಬ್ಬಂದಿ ನಡುವಿನ ವಾಗ್ವಾದ ಸಾವಿನಲ್ಲಿ ಅಂತ್ಯವಾದ ಘಟನೆ ಭಾನುವಾರ ರಾತ್ರಿ (ಸೆ.10 ರಂದು) ಹೈದರಾಬಾದ್ ಪುಂಜಗುಟ್ಟಾ ಪ್ರದೇಶದಲ್ಲಿ ನಡೆದಿದೆ.
ಪುಂಜಗುಟ್ಟಾ ಪ್ರದೇಶದಲ್ಲಿರುವ ಮೆರಿಡಿಯನ್ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದೆ.
ಘಟನೆ ಹಿನ್ನೆಲೆ: ಲಿಯಾಕತ್ ಎನ್ನುವ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ರೆಸ್ಟೋರೆಂಟ್ ಗೆ ಬಂದಿದ್ದರು. ಈ ವೇಳೆ ಅವರು ಬಿರಿಯಾನಿ ಆರ್ಡರ್ ಮಾಡಿದ್ದಾರೆ. ಬಿರಿಯಾನಿ ತಿನ್ನುತ್ತಾ ಅವರು ಹೊಟೇಲ್ ಸಿಬ್ಬಂದಿ ಅವರ ಬಳಿ ಎಕ್ಸ್ಟ್ರಾ ರಾಯಿತಾ (ಸಾಲಡ್) ಕೇಳಿದ್ದಾರೆ. ಇದೇ ವಿಚಾರವಾಗಿ ಹೊಟೇಲ್ ಸಿಬ್ಬಂದಿ ಹಾಗೂ ಗ್ರಾಹಕನ ನಡುವೆ ವಾಗ್ವಾದ ಉಂಟಾಗಿದೆ. ಲಿಯಾಕತ್ ಅವರು ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಹೊಟೇಲ್ ಸಿಬ್ಬಂದಿಗಳು ಹಾಗೂ ಬಂದಿದ್ದ ಗ್ರಾಹಕರ ಗುಂಪಿನ ನಡುವೆ ಈ ವಿಚಾರವಾಗಿ ಜಗಳ ಉಂಟಾಗಿದೆ. ಪರಸ್ಪರ ಗಲಾಟೆ ಮಾಡಿಕೊಂಡ ಪರಿಣಾಮ ಹಲ್ಲೆ ನಡೆಸಿದ್ದಾರೆ.
ರಾತ್ರಿ 11 ಗಂಟೆ ಸುಮಾರಿಗೆ ಪಂಜಗುಟ್ಟ ಪೊಲೀಸ್ ಠಾಣೆಗೆ ತೆರಳಿ ಸಮಸ್ಯೆ ಬಗೆಹರಿಸಲು ಎರಡೂ ಗುಂಪಿನವರು ಬಂದಿದ್ದಾರೆ. ಆದರೆ ಠಾಣೆಯ ಸಮೀಪಕ್ಕೆ ಬರುತ್ತಿದ್ದಂತೆ ಲಿಯಾಕತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಎದೆನೋವು ಕಾಣಿಸಿಕೊಂಡು ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಹೋಟೆಲ್ನ ಮ್ಯಾನೇಜರ್ ಸೇರಿದಂತೆ ಹೋಟೆಲ್ ಸಿಬ್ಬಂದಿ ಲಿಕಾಯತ್ಗೆ ತೀವ್ರವಾಗಿ ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ತೀವ್ರವಾಗಿ ಹಲ್ಲೆಗೆ ಒಳಗಾದ ಪರಿಣಾಮ ಅವರಿಗೆ ಹೃದಯ ಸ್ತಂಭನ ಉಂಟಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಶಂಕಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಕಾರಣ ತಿಳಿದು ಬರಲಿದೆ ಎಂದು ವರದಿ ತಿಳಿಸಿದೆ.
ಸದ್ಯ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !