ಮನೆಯೊಳಗೆ ಕಾಲಿಡಲು ಬಿಡದ ತಂದೆಯನ್ನು ಬೆಂಕಿ ಹಚ್ಚಿ ಕೊಂದ ಮಗ!
Team Udayavani, Nov 12, 2018, 4:43 PM IST
ಚೆನ್ನೈ: ಮನೆಯೊಳಗೆ ಮಲಗಲು ಅವಕಾಶ ಕೊಡುವುದಿಲ್ಲ ಎಂದ ತಂದೆಯ ಮೈಮೇಲೆ ಕಟುಕ ಮಗ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ ಹೃದಯವಿದ್ರಾವಕ ಘಟನೆ ತಮಿಳುನಾಡಿನ ರೋಯಪೆಟ್ಟಾದಲ್ಲಿ ನಡೆದಿದೆ.
ಏನಿದು ಘಟನೆ:
ತಮಿಳುನಾಡಿನ ರೋಯಪೆಟ್ಟಾದಲ್ಲಿರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಇ ಶಂಕರ್ ಹಾಗೂ ಮೂವರು ಮಕ್ಕಳ ನಡುವೆ ಜಗಳ ಆರಂಭವಾಗಿತ್ತು. ಅದಕ್ಕೆ ಕಾರಣವಾಗಿದ್ದು, ಒಬ್ಬ ಮಗನಿಗೆ ಮನೆಯಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂಬುದು!
ಶಂಕರ್ ಗೆ ರಾಮಚಂದ್ರನ್(29ವರ್ಷ), ರಾಮಕೃಷ್ಣನ್(28ವರ್ಷ) ಹಾಗೂ ವಿಜಯ್(26ವರ್ಷ) ಸೇರಿ ಮೂವರು ಗಂಡು ಮಕ್ಕಳು. ಶುಕ್ರವಾರ ತಂದೆ ಶಂಕರ್ ಮತ್ತು ಮಗ ರಾಮಕೃಷ್ಣನ ನಡುವೆ ಜಗಳವಾಗಿತ್ತು. ಕುಡಿತದ ಅಭ್ಯಾಸ ಹೊಂದಿರುವ ನಿನಗೆ ನನ್ನ ಮನೆಯೊಳಗೆ ಪ್ರವೇಶ ಇಲ್ಲ ಎಂದು ತಂದೆ ಹೇಳಿದ್ದೇ ಜಗಳಕ್ಕೆ ಕಾರಣವಾಗಿತ್ತು.
ಗಲಾಟೆ ಕೇಳಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಝಾಮ್ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಶಂಕರ್ ಹಾಗೂ ರಾಮಕೃಷ್ಣನ್ ನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ, ಬುದ್ದಿವಾದ ಹೇಳಿ ಶುಕ್ರವಾರ ರಾತ್ರಿ ವಾಪಸ್ ಕಳುಹಿಸಿದ್ದರು.
ರಾತ್ರಿ ಶಂಕರ್ ಅವರ ಕಿರಿಯ ಮಗ ವಿಜಯ್ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರೆ, ತಂದೆ ಶಂಕರ್ ಕೆಳ ಅಂತಸ್ತಿನಲ್ಲಿ ಮಲಗಿದ್ದರೆ, ರಾಮಕೃಷ್ಣನ್ ಮನೆಯ ಹೊರಗೆ ಮಲಗಿದ್ದ. ಸುಮಾರು 1.30ರ ಮುಂಜಾನೆ ಹೊತ್ತಿಗೆ ತಂದೆ ಕೂಗಿಕೊಳ್ಳುತ್ತಿರುವ ಶಬ್ದ ಕೇಳಿ ವಿಜಯ್ ಕೆಳಗೆ ಓಡಿ ಬಂದಿದ್ದ. ಆಗ ಬೆಂಕಿಯಲ್ಲಿ ತಂದೆ ಸುಟ್ಟು ಕರಕಲಾಗಿದ್ದರು ಎಂದು ವರದಿ ತಿಳಿಸಿದೆ. ಶೇ.95ರಷ್ಟು ಸುಟ್ಟು ಹೋಗಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಸ್ಪಂದಿಸದೆ ಸಾವಿಗೀಡಾಗಿದ್ದರು.
2ನೇ ಪುತ್ರ ರಾಮಕೃಷ್ಣನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ. ತಾನೇ ಪೆಟ್ರೋಲ್ ಖರೀದಿಸಿ ತಂದು ಕಿಟಕಿ ಮೂಲಕ ತಂದೆ ಮೈಮೇಲೆ ಸುರಿದು ಬೆಂಕಿ ಹಚ್ಚಿರುವುದಾಗಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!