ದಿಲ್ಲಿ: ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ,ವ್ಯಕ್ತಿ ಸುಟ್ಟು ಕರಕಲು
Team Udayavani, Aug 11, 2018, 3:30 PM IST
ಹೊಸದಿಲ್ಲಿ : ದಿಲ್ಲಿಯ ಅಂಬೇಡ್ಕರ್ ನಗರ ಪ್ರದೇಶದಲ್ಲಿ ಇಂದು ಶನಿವಾರ ನಸುಕಿನ ವೇಳೆ ಚಲಿಸುತ್ತಿದ್ದ ಕಾರು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಅದರೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾದ ದುರ್ಘಟನೆ ವರದಿಯಾಗಿದೆ.
ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ಫೋನ್ ಕರೆ ನಸುಕಿನ 1.50ರ ಹೊತ್ತಿಗೆ ದಿಲ್ಲಿ ಅಗ್ನಿ ಶಾಮಕ ದಳಕ್ಕೆ ಬಂದೊಡನೆಯೇ ಸಿಬಂದಿ ಅಲ್ಲಿಗೆ ಧಾವಿಸಿದರು. ಅದಾಗಲೇ ಕಾರು ಸುಟ್ಟು ಭಸ್ಮವಾಗಿತ್ತು ಮತ್ತು ಅದರೊಳಗಿದ್ದಾತ ಸುಟ್ಟು ಕರಕಲಾಗಿದ್ದ ಎಂದು ಮೂಲಗಳು ತಿಳಿಸಿವೆ.
ವೇಗವಾಗಿ ಸಾಗುತ್ತಿದ್ದ ಯಾವುದೋ ಇನ್ನೊಂದು ವಾಹನ ಈ ಕಾರಿಗೆ ಢಿಕ್ಕಿ ಹೊಡೆದಿರಬಹುದಾದ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿರಬಹುದೆಂದು ತನಿಖಾ ತಂಡ ಶಂಕಿಸಿದೆ. ಕಾರಿನಲ್ಲಿ ಪೇಪರ್ ಮೂಟೆಯನ್ನು ಸಾಗಿಸಲಾಗುತ್ತಿತ್ತು.
ಕಳೆದ ಜು.18ರಂದು ಗುಜರಾತಿನ ಟಂಕಾರಾ ಪಟ್ಟಣಕ್ಕೆ ಸಮೀಪ ರಾಜ್ಕೋಟ್ – ಮೋರ್ಬಿ ಹೈವೇಯಲ್ಲಿ ಕಾರೊಂದು ಟ್ರಕ್ಕಿಗೆ ಢಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದ ಅವಘಡದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟು ಇನ್ನೋರ್ವರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ