ಎಮ್ಮೆಯ ಹುಟ್ಟುಹಬ್ಬ ಆಚರಿಸಿದವನ ವಿರುದ್ಧ ಕೇಸ್ ದಾಖಲು… ಕಾರಣವೇನು?
Team Udayavani, Mar 13, 2021, 3:43 PM IST
ಥಾಣೆ: ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ತಾನು ಪ್ರೀತಿಯಿಂದ ಸಾಕಿದ್ದ ಎಮ್ಮೆಯ ಹುಟ್ಟುಹಬ್ಬವನ್ನು ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ ಮೂಲದ ವ್ಯಕ್ತಿಯ ಮೇಲೆ ಕೇಸ್ ದಾಖಲಾದ ಘಟನೆ ನಡೆದಿದೆ.
ವ್ಯಕ್ತಿಯನ್ನು ಕಿರಣ್ ಮಹಾತ್ರೆ (30) ಎಂದು ಗುರುತಿಸಲಾಗಿದ್ದು, ಈತ ತನ್ನ ಮನೆಯಲ್ಲಿ ತಾನು ಪ್ರೀತಿಯಿಂದ ಸಾಕಿದ್ದ ಎಮ್ಮೆಯ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಮಾಡಿದ್ದಾನೆ. ಈ ಸಮಯದಲ್ಲಿ ತನ್ನ ಗೆಳೆಯರನ್ನು ಒಳಗೊಂಡಂತೆ ಹಲವರನ್ನು ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಿದ್ದ ಎನ್ನಲಾಗಿದೆ.
ಆದರೆ ಈ ನಡುವೆ ಎಮ್ಮೆಯ ಹುಟ್ಟುಹಬ್ಬಕ್ಕೆ ಆಗಮಿಸಿದವರು ಮಾಸ್ಕ್ ಧರಿಸಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಒಳಗೊಂಡಂತೆ ಯಾವುದೇ ರೀತಿಯಾದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಲ್ಲ, ಇದರಿಂದ ಈಗಾಗಲೇ ಹೆಚ್ಚಳವಾಗುತ್ತಿರುವ ಸೋಂಕಿನ ಪ್ರಮಾಣದ ಜೊತೆ ಜೊತೆಗೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿದೆ ಎಂದು ವಿಷ್ಣು ನಗರ್ ಪೋಲಿಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ‘5ಜಿ ಐಫೋನ್ 12,’ ಉತ್ಪಾದನೆ : ಕಡಿಮೆ ಬೆಲೆಗೆ ಕೈ ಸೇರುವ ನಿರೀಕ್ಷೆ
ಇದೀಗ ವ್ಯಕ್ತಿಯ ವಿರುದ್ಧ IPC ಸೆಕ್ಷನ್ 269 ದ ಅಡಿಯಲ್ಲಿ ಜೀವಕ್ಕೆ ಅಪಾಯಕಾರಿಯಾಗುವ ಸೋಂಕನ್ನು ಹರಡುತ್ತಿರುವ ಆರೋಪದ ಮೇಲೆ ಮತ್ತು ಸಾಂಕ್ರಾಮಿಕ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸದ್ಯ ಭಾರತದಲ್ಲಿ 24,800 ಕ್ಕೂ ಅಧಿಕ ಹೊಸ ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಕೋವಿಡ್ ಸೋಂಕಿನ ಪ್ರಮಾಣ 11.33 ಮಿಲಿಯನ್ ನ ಗಡಿ ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ