ಕಾರಿಗೆ ಹಠಾತ್ ಬೆಂಕಿ, ವ್ಯಕ್ತಿ ಸಜೀವ ದಹನ
Team Udayavani, Aug 14, 2017, 6:25 AM IST
ಕೊಯಂಬತ್ತೂರು: ಹೊತ್ತಿ ಉರಿಯುತ್ತಿದ್ದ ಕಾರಿನಿಂದ ಮಡದಿ ಮತ್ತು ತನ್ನಿಬ್ಬರು ಮಕ್ಕಳನ್ನು ಹೊರಗೆ ತಳ್ಳಿ ರಕ್ಷಿಸಿದ ವ್ಯಕ್ತಿಯೊಬ್ಬರು ಅದೇ ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಕೊಯಂಬತ್ತೂರು ಬಳಿ ಭಾನುವಾರ ಬೆಳಗ್ಗೆ ನಡೆದಿದೆ.
ಬೆಂಗಳೂರು ಮೂಲದ ಆಭರಣ ಉದ್ಯಮಿ ದಿಲೀಪ್ ಕುಮಾರ್ (38) ಮೃತರು. ದಿಲೀಪ್ ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಕೊಯಂಬತ್ತೂರು ಮಾರ್ಗವಾಗಿ ಕೊಚ್ಚಿಗೆ ತೆರಳುತ್ತಿದ್ದರು. ಭಾನುವಾರ ಬೆಳಗ್ಗೆ ಮಡುಕ್ಕುರೈ ಟೋಲ್ಗೇಟ್ ಬಳಿಗೆ ಬರುತ್ತಲೇ ಅವರ ಕಾರಿನ ಎಂಜಿನ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ದಿಲೀಪ್ ತಮ್ಮ ಪತ್ನಿ ಮತ್ತು ಮಕ್ಕಳನ್ನು ಕಾರಿನಿಂದ ಹೊರಗೆ ತಳ್ಳುವಲ್ಲಿ ಸಫಲರಾಗಿದ್ದಾರೆ. ಆದರೆ, ಕುಟುಂಬದವರನ್ನೆಲ್ಲ ಕಾರಿನಿಂದ ಕಳಗಿಳಿಸಿದ ದಿಲೀಪ್ ತಮ್ಮ ಸೀಟ್ ಬೆಲ್ಟ್ ಅನ್ನು ಬಿಚ್ಚುವಲ್ಲಿ ವಿಫಲರಾಗಿದ್ದಾರೆ. ಅಷ್ಟೊತ್ತಿಗಾಗಲೇ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿತ್ತು. ಹೀಗಾಗಿ ಪತ್ನಿ ಮತ್ತು ಮಕ್ಕಳ ಕಣ್ಣೆದುರೇ ದಿಲೀಪ್ ದುರ್ಮರಣಕ್ಕೀಡಾದರು. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ