ಗರ್ಭಿಣಿಗೆ ಸಹಾಯ; ರೈಲ್ವೆ ಫ್ಲ್ಯಾಟ್ ಫಾರಂ ಮೇಲೆ ರಿಕ್ಷಾ ಓಡಿಸಿದ ಚಾಲಕ! ಮುಂದೇನಾಯ್ತು
Team Udayavani, Aug 7, 2019, 5:27 PM IST
ಮುಂಬೈ:ಅವಧಿಗೂ ಮುನ್ನವೇ ಹೊಟ್ಟೆ ನೋವು ಕಾಣಿಸಿಕೊಂಡ ಮಹಿಳೆಗೆ ನೆರವು ನೀಡುವ ನಿಟ್ಟಿನಲ್ಲಿ ಆಟೋ ಚಾಲಕರೊಬ್ಬರು ರಿಕ್ಷಾವನ್ನು ರೈಲ್ವೆ ನಿಲ್ದಾಣದ ಫ್ಲ್ಯಾಟ್ ಫಾರಂ ಮೇಲೆ ಚಲಾಯಿಸಿಕೊಂಡು ಹೋದ ಘಟನೆ ಮುಂಬೈನ ವಿರಾರ್ ನಲ್ಲಿ ನಡೆದಿದೆ.
ಮಾನವೀಯತೆ ನೆಲೆಯಲ್ಲಿ ಮಹಿಳೆಯ ನೆರವಿಗೆ ಧಾವಿಸಿದ ವ್ಯಕ್ತಿ ವಿರಾರ್ ನ ಧೋಂಗ್ರಾಪಾದಾ ನಿವಾಸಿ ಸಾಗರ್ ಕಮಲಾಕರ್ ಗಾವಾಡ್(34ವರ್ಷ) ಎಂದು ಗುರುತಿಸಲಾಗಿದೆ.
ಏನಿದು ಘಟನೆ:
ಪೊಲೀಸರ ಮಾಹಿತಿ ಪ್ರಕಾರ, ಭಾನುವಾರ ಬೆಳಗ್ಗೆ ವಿಕಲಚೇತನರಿಗಾಗಿ ಕಾಯ್ದಿರಿಸಿದ್ದ ಕಂಪಾರ್ಟ್ ಮೆಂಟ್ ನಲ್ಲಿ ಏಳು ತಿಂಗಳ ಗರ್ಭಿಣಿ ಮತ್ತು ಪತಿ ರೈಲಿನಲ್ಲಿ ಕುಳಿತಿದ್ದರು. ಏತನ್ಮಧ್ಯೆ ಭಾರೀ ಮಳೆಯಿಂದಾಗಿ ರೈಲು ಹೊರಡುವುದು ವಿಳಂಬವಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಗೆ ದಿಢೀರನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ತಿಳಿಸಿದ್ದಾರೆ.
ಪತ್ನಿಯ ಸ್ಥಿತಿ ಕಂಡು ಪತಿ ಗಾಬರಿಗೊಳಗಾಗಿ ರೈಲ್ವೆ ಕಂಪಾರ್ಟ್ ಮೆಂಟ್ ನಲ್ಲಿ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದರು. ಆದರೆ ಯಾರು ನೆರವು ನೀಡಲಿಲ್ಲ, ಬಳಿಕ ರೈಲ್ವೆ ನಿಲ್ದಾಣದ ಬಲಭಾಗದಲ್ಲಿ ರಿಕ್ಷಾ ಚಾಲಕ ಗಾವಾಡ್ ನಿಂತಿರುವುದನ್ನು ಗಮನಿಸಿದ ಪತಿ, ಸಹಾಯ ಮಾಡುವಂತೆ ವಿನಂತಿಸಿಕೊಂಡಿದ್ದರು.
#WATCH Mumbai:Auto-rickshaw driver took rickshaw on platform at Virar Railway Station on Aug4 to pick a pregnant woman to take her to the hospital.RPF didn’t arrest him immediately as the “lady was in extreme labour pain,but he was later arrested&released with a warning by court” pic.twitter.com/eckppwGtr2
— ANI (@ANI) August 6, 2019
ಆಗ ಗಾವಾಡ್ ರಿಕ್ಷಾವನ್ನು ರೈಲ್ವೆ ಫ್ಲ್ಯಾಟ್ ಫಾರಂ ಮೇಲೆ ತಂದು ಗರ್ಭಿಣಿಯನ್ನು ಹಾಗೂ ಪತಿಯನ್ನು ವಿರಾರ್ ನಲ್ಲಿರುವ ಸಂಜೀವಿನಿ ಆಸ್ಪತ್ರೆಗೆ ತಂದು ದಾಖಲಿಸಿರುವುದಾಗಿ ಪೊಲೀಸ್ ಇನ್ಸ್ ಪೆಕ್ಟರ್ ಪ್ರವೀಣ್ ಕುಮಾರ್ ಪ್ರವೀಣ್ ಕುಮಾರ್ ಯಾದವ್ ತಿಳಿಸಿದ್ದಾರೆ.
ಮಹಿಳೆ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದು, ತಾಯಿ, ಮಗು ಆರೋಗ್ಯವಾಗಿರುವುದಾಗಿ ವರದಿ ತಿಳಿಸಿದೆ. ಬಳಿಕ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಕಾನೂನನ್ನು ಉಲ್ಲಂಘಿಸಿದ್ದಕ್ಕೆ ರಿಕ್ಷಾ ಚಾಲಕ ಗಾವಾಡ್ ಅವರನ್ನು ಬಂಧಿಸಿದ್ದರು. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಎಚ್ಚರಿಕೆ ನೀಡಿ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ