IRCTC  v/s  ಟಿಕೆಟ್ ಕ್ಯಾನ್ಸಲ್: ಕೊನೆಗೂ 33 ರೂ. ವಸೂಲಿ ಮಾಡಿದ ಪ್ರಯಾಣಿಕ!


Team Udayavani, May 9, 2019, 2:00 PM IST

IRCTC

ಜೈಪುರ್:ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಜಾರಿಗೊಳಿಸುವ ಮುನ್ನವೇ ಪ್ರಯಾಣಿಕರೊಬ್ಬರು ರೈಲ್ವೆ ಟಿಕೆಟ್ ಬುಕ್ ಮಾಡಿ, ಕ್ಯಾನ್ಸಲ್ ಮಾಡಿದ್ದರು. ಆದರೆ ಸೇವಾ ತೆರಿಗೆಯನ್ನು ಸೇರಿಸಿ ಟಿಕೆಟ್ ರದ್ದು ಮಾಡಿದ್ದನ್ನು ಪ್ರಶ್ನಿಸಿ ಪ್ರಯಾಣಿಕರೊಬ್ಬರು ಸುಮಾರು ಎರಡು ವರ್ಷಗಳ ಕಾಲ ಆರ್ ಟಿಐ ಮೂಲಕ ಹೋರಾಟ ನಡೆಸಿ ಕೊನೆಗೂ 33 ರೂಪಾಯಿಯನ್ನು ರಿಫಂಡ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ!

30ರ ಹರೆಯದ ಇಂಜಿನಿಯರ್ ಸುಜೀತ್ ಸ್ವಾಮಿ 2017ರ ಏಪ್ರಿಲ್ ನಲ್ಲಿ ರೈಲು ಟಿಕೆಟ್ ಬುಕ್ ಮಾಡಿದ್ದರು.(ಸರಕು ಮತ್ತು ಸೇವಾ ತೆರಿಗೆ ಜಾರಿಯಾಗುವ ಮೊದಲು). ಬಳಿಕ ಟಿಕೆಟ್ ರದ್ದು ಮಾಡಿದ್ದರು. ಟಿಕೆಟ್ ಪ್ರಕಾರ ಸುಜೀತ್ 2017ರ ಜುಲೈ 2ರಂದು ಪ್ರಯಾಣಿಸಬೇಕಿತ್ತು. ಅಂದರೆ ಹೊಸ ತೆರಿಗೆ ನೀತಿ ಜಾರಿಯಾದ ನಂತರ.

ಏತನ್ಮಧ್ಯೆ ಟಿಕೆಟ್ ಕ್ಯಾನ್ಸಲ್ ಮಾಡಿದಾಗ  ಐಆರ್ ಸಿಟಿಸಿ 35ರೂಪಾಯಿಯನ್ನು (ಜಿಎಸ್ ಟಿ) ಹೆಚ್ಚುವರಿಯಾಗಿ ಕಡಿತಗೊಳಿಸಿದ್ದರು. ಸುಜೀತ್ 2017ರ ಏಪ್ರಿಲ್ ನಲ್ಲಿ ಜೈಪುರದ ಕೋಟಾದಿಂದ ದೆಹಲಿಗೆ ಹೋಗಲು ಗೋಲ್ಡನ್ ಟೆಂಪಲ್ ಮೇಲ್ ರೈಲಿನಲ್ಲಿ ಹೋಗಲು (ಜುಲೈ 2ಕ್ಕೆ) ಟಿಕೆಟ್ ಬುಕ್ ಮಾಡಿದ್ದರು. ಅದರ ಬೆಲೆ 765 ರೂಪಾಯಿ. ಬಳಿಕ ಟಿಕೆಟ್ ಕ್ಯಾನ್ಸಲ್ ಮಾಡಿದಾಗ ಸುಜೀತ್ ಗೆ 665 ರೂಪಾಯಿ ರಿಫಂಡ್ ಆಗಿತ್ತು.

ವೇಯಿಟಿಂಗ್ ಲಿಸ್ಟ್ ನಲ್ಲಿ ಟಿಕೆಟ್ ಕ್ಯಾನ್ಸಲ್ ಮಾಡಿದರೆ 65 ರೂಪಾಯಿ ಕಡಿತ ಮಾಡುತ್ತಾರೆ. ಆದರೆ ಸುಜೀತ್ ಗೆ 100 ರೂಪಾಯಿ ಕಡಿತ ಮಾಡಿದ್ದರು. ಹೀಗೆ 2017ರಿಂದ ಹೆಚ್ಚುವರಿಯಾಗಿ ಕಡಿತಗೊಳಿಸಿದ್ದ 35 ರೂಪಾಯಿ ಸೇವಾ ತೆರಿಗೆ ಹಣಕ್ಕಾಗಿ ಹೋರಾಟ ನಡೆಸಿದ್ದರು!

ಐಆರ್ ಸಿಟಿಸಿ ದರ ಕಡಿತದ ಗೊಂದಲದ ಬಗ್ಗೆ ಸುಜೀತ್ ಆರ್ ಟಿಐ ಅರ್ಜಿ ಸಲ್ಲಿಸಿದ್ದರು. ಅದರ ಪ್ರಕಾರ ಜಿಎಸ್ ಟಿ ಜಾರಿಯಾಗುವ ಮೊದಲು ಮತ್ತು ನಂತರ ಯಾವ ಕ್ರಮ ಎಂದು ಪ್ರಶ್ನಿಸಿದ್ದರು. ಅದಕ್ಕೆ ಜಿಎಸ್ ಟಿ ಜಾರಿಯಾದ ನಂತರ ಟಿಕೆಟ್ ಬುಕ್ ಮಾಡಿದ್ದರೆ ಸೇವಾ ತೆರಿಗೆ ಹಣ ರಿಫಂಡ್ ಮಾಡುವುದಿಲ್ಲ ಎಂದು ರೈಲ್ವೆ ಇಲಾಖೆ ಉತ್ತರ ಕೊಟ್ಟಿತ್ತು.

ಅದರಂತೆ ತಾನು ಜಿಎಸ್ ಟಿ ಜಾರಿಯಾಗುವ ಮೊದಲೇ(ಜುಲೈ 1, 2017) ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದೆ. ಹೀಗಾಗಿ ತನ್ನ ಟಿಕೆಟ್ ನಲ್ಲಿ ಕಡಿತಗೊಳಿಸಿದ್ದ 35 ರೂ. ಸೇವಾ ತೆರಿಗೆ ಹಣ ವಾಪಸ್ ಕೊಡಬೇಕೆಂದು ಮನವಿ ಮಾಡಿದ್ದರು. ಐಆರ್ ಸಿಟಿಸಿ 35 ರೂಪಾಯಿ ವಾಪಸ್ ಕೊಡಬೇಕು ಎಂದು ಆರ್ ಟಿಐ ನಲ್ಲಿ ಸ್ವಾಮಿಗೆ ಉತ್ತರ ಬಂದಿತ್ತು. ಆ ಪ್ರಕಾರ ಸುಜೀತ್ ಸ್ವಾಮಿ ಬ್ಯಾಂಕ್ ಖಾತೆಗೆ 2019ರ ಮೇ 1ರಂದು 33 ರೂಪಾಯಿ ಹಣ (2 ರೂಪಾಯಿ ಹಣ ಐಆರ್ ಸಿಟಿಸಿ ಕಡಿತಗೊಳಿಸಿತ್ತು) ಜಮೆಯಾಗಿತ್ತು!

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.