ಮಹಾರಾಷ್ಟ್ರ ಸಚಿವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಆರೋಪಿ ಸೆರೆ
Team Udayavani, Jul 21, 2017, 3:31 PM IST
ಪುಣೆ : ಸಾಮಾಜಿಕ ಜಾಲ ತಾಣಗಳಲ್ಲಿ ಮಹಾರಾಷ್ಟ್ರ ಸಚಿವರೋರ್ವರ ನಕಲಿ ಖಾತೆಯನ್ನು ತೆರೆದು ಆಕ್ಷೇಪಾರ್ಹ ಫೋಟೋ ಹಾಗೂ ವಿಷಯಗಳನ್ನು ಹಾಕಿದ ಆರೋಪದ ಮೇಲೆ 30ರ ಹರೆಯದ ಆರೋಪಿಯನ್ನು ಪುಣೆ ಪೊಲೀಸ್ನ ಸೈಬರ್ ಸೆಲ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯ ಹೆಸರು ಋತುರಾಜ ನಲವಡೆ. ಈತ ಪುಣೆ ಜಿಲ್ಲೆಯ ಜುನ್ನಾರ್ ತೆಹಶೀಲ್ ನಿವಾಸಿ. ಈತ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್ ಬಾಪಟ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ನಕಲಿ ಖಾತೆ ತೆರೆದು, ಆಕ್ಷೇಪಾರ್ಹ ಫೋಟೋಗಳನ್ನು ಹಾಗೂ ವಿಷಯಗಳನ್ನು ಹಾಕಿದ್ದಾನೆ. ಸಚಿವರಿಗೆ ಪರಿಚಿತರಿರುವ ಅನೇಕರಿಗೆ ಆತ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು ಅದನ್ನು ಅವರು ಸ್ವೀಕರಿಸಿದ್ದಾರೆ.
ಸಚಿವ ಬಾಪಟ್ ಅವರ ಪ್ರಚಾರ ಸಲಹೆಗಾರನಾಗಿದ್ದು ಬಿಜೆಪಿ ನಾಯಕನ ಸಾಮಾಜಿಕ ಜಾಲ ಖಾತೆಗಳನ್ನು ನಿಭಾಯಿಸುತ್ತಿರುವ ಸುನೀಲ್ ಮಾನೆ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಅಂತೆಯೇ ಪೊಲೀಸರು ಆರೋಪಿ ನಲವಡೆಯನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ
10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
Form 17c: ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?
Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ
Technical Fault: 6 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
MUST WATCH
ಹೊಸ ಸೇರ್ಪಡೆ
ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ
Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು
IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?
ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!