Road mishap: ಬೈಕಿಗೆ ಢಿಕ್ಕಿ ಹೊಡೆದ ಕಾರು; ಸಹೋದರ, ಸಹೋದರಿಯರು ಸೇರಿ ಮೂವರು ಮೃತ್ಯು
Team Udayavani, Apr 13, 2024, 12:56 PM IST
ಗ್ರೇಟರ್ ನೋಯ್ಡಾ: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸಹೋದರ ಹಾಗೂ ಇಬ್ಬರು ಸಹೋದರಿಯರು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಶುಕ್ರವಾರ (ಏ.12 ರಂದು) ಪರಿ ಚೌಕ್ ರಸ್ತೆಯಲ್ಲಿ ಮಧ್ಯರಾತ್ರಿ 2:30 ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಸುರೇಂದ್ರ ಸಿಂಗ್ (28) ಅವರ ಸಹೋದರಿ ಶೈಲಿ (26) ಅಂಶು (14) ಮೃತ ದುರ್ಧೈವಿಗಳು. ಅಂಶು ಅವರ ಸ್ನೇಹಿತೆ ಸಿಮ್ಮಿ ಗಂಭೀರ ಗಾಯಗೊಂಡಿದ್ದಾರೆ.
ಸುರೇಂದ್ರ ಸಿಂಗ್ ಸೇರಿದಂತೆ ನಾಲ್ವರು ತಮ್ಮ ಸ್ಪ್ಲೆಂಡರ್ ಬೈಕ್ನಲ್ಲಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಾಸಾಗುತ್ತಿದ್ದರು. ಈ ವೇಳೆ ಅಪರಿಚಿತ ಕಾರೊಂದು ಅವರ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ನೆಲಕ್ಕುರುಳಿದವರ ಮೇಲೆ ಕಾರು ಹರಿದು ಪರಾರಿ ಆಗಿದೆ.
ಸುರೇಂದ್ರ ಹಾಗೂ ಆತನ ಇಬ್ಬರು ಸಹೋದರಿಯರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಮ್ಮಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ನೋಯ್ಡಾದ ಕುಲೇಸರ ಎಂಬ ತಮ್ಮ ನಿವಾಸದಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಕಸ್ನಾದಿಂದ ಹಿಂತಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಿಚಿತ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ನಿರ್ಲಕ್ಷ್ಯದ ಚಾಲನೆ), 338 (ನಿರ್ಲಕ್ಷ್ಯದಿಂದ ತೀವ್ರ ನೋವನ್ನುಂಟುಮಾಡುವುದು) ಮತ್ತು 304A (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ