ಅಡಿಪಾಯ ಹಾಕಲು ಅಗೆಯುವಾಗ ಸಿಕ್ತು ಲಕ್ಷಾಂತರ ರೂಪಾಯಿ ಚಿನ್ನಾಭರಣ… ಮುಂದೇನಾಯ್ತು!
Team Udayavani, Sep 6, 2019, 5:21 PM IST
ಲಕ್ನೋ:ಹೊಸ ಮನೆ ಕಟ್ಟಲು ಅಡಿಪಾಯ ತೆಗೆಯುತ್ತಿದ್ದ ವೇಳೆ ನೂರು ವರ್ಷದ ಹಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಹಾರ್ಡೊಯಿ ಎಂಬಲ್ಲಿ ನಡೆದಿದೆ. ಆದರೆ ವಿಷಯ ತಿಳಿದ ಪೊಲೀಸರು ಭೂಮಿಯಲ್ಲಿ ಪತ್ತೆಯಾದ ಚಿನ್ನಾಭರಣ ವಶಪಡಿಸಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ.
ಮನೆಯ ಅಡಿಪಾಯ ಅಗೆಯುವಾಗ ದೊರೆತ ನೂರಾರು ವರ್ಷಗಳ ಹಿಂದಿನ 650 ಗ್ರಾಮ್ ಚಿನ್ನ, 4.53 ಕೆಜಿ ಬೆಳ್ಳಿ ಆಭರಣಗಳ ದೊರೆತಿರುವುದಾಗಿ ಹಾರ್ಡೊಯಿ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ.
ಪತ್ತೆಯಾದ ಚಿನ್ನಾಭರಣಗಳಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ನಾವು ಆ ವ್ಯಕ್ತಿಯಿಂದ ಅದನ್ನು ವಶಪಡಿಸಿಕೊಂಡಿರುವುದಾಗಿ ಪ್ರಿಯದರ್ಶಿ ಹೇಳಿದ್ದಾರೆ.
ಮನೆಯ ಅಡಿಪಾಯ ತೆಗೆಯುತ್ತಿದ್ದಾಗ ಚಿನ್ನಾಭರಣ ಸಿಕ್ಕಿದ ಸುದ್ದಿ ಇಡೀ ಗ್ರಾಮದ ತುಂಬಾ ಹರಡಿತ್ತು. ಹೀಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ಮೊದಲು ನಿರಾಕರಿಸಿದ್ದು, ಬಳಿಕ ಚಿನ್ನಾಭರಣ ದೊರೆತ ವಿಷಯ ಬಾಯ್ಬಿಟ್ಟಿರುವುದಾಗಿ ವರದಿ ವಿವರಿಸಿದೆ.
ಭೂಮಿಯನ್ನು ಅಗೆಯುವಾಗ ಯಾವುದೇ ಚಿನ್ನಾಭರಣ ಅಥವಾ ಬೆಲೆಬಾಳುವ ವಸ್ತು ಪತ್ತೆಯಾದಲ್ಲಿ ಅದನ್ನು ನಿಧಿ ಎಂದೇ ಪರಿಗಣಿಸಲಾಗುತ್ತದೆ. ಅಲ್ಲದೇ ಇದು ಇಂಡಿಯನ್ ಟ್ರೆಶರ್ ಟ್ರೋವ್ ಕಾಯ್ದೆ 1878ರ ಸೆಕ್ಷನ್ 4ರ ಪ್ರಕಾರ ಸರಕಾರದ ವಶಕ್ಕೆ ಒಪ್ಪಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ