ನದಿಯಲ್ಲಿ ಸ್ನಾನ ಮಾಡುತ್ತಿದ್ದ ವ್ಯಕ್ತಿಯನ್ನು ತಿಂದು ಹಾಕಿದ ಮೊಸಳೆ
Team Udayavani, Jul 4, 2017, 3:49 PM IST
ತಂಜಾವೂರು : ಜಿಲ್ಲೆಯ ಕೊಲ್ಲಿದಂ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ 65ರ ಹರೆಯದ ಅನೈಕರಾಯ್ ನಿವಾಸಿ ಸೆಲ್ಲಕಣ್ಣು ಎಂಬಾತನನ್ನು ಮೊಸಳೆ ತಿಂದು ಹಾಕಿದ ಭೀಕರ ಘಟನೆ ವರದಿಯಾಗಿದೆ.
ಸೆಲ್ಲಕಣ್ಣು ನದಿಯಲ್ಲಿ ಸ್ನಾನ ಮಾಡಿಕೊಂಡಿದ್ದಾಗ ಇದ್ದಕ್ಕಿದ್ದಂತೆಯೇ ನೀರಿನಲ್ಲಿ ಧಾವಿಸಿ ಬಂದ ಮೊಸಳೆಯು ಆತನ ಮೇಲೆ ಎರಗಿ ಕಚ್ಚಿ ಆತನನ್ನು ನದಿಯಾಳಕ್ಕೆ ಒಯ್ದಿತು. ಆತನ ಆಕ್ರಂದನ ಕೇಳಿಸಿಕೊಂಡ ಅಲ್ಲೇ ಇದ್ದ ಮೀನುಗಾರರು ಒಡನೆಯೇ ಆತನ ನೆರವಿಗೆ ಧಾವಿಸಿದರು. ಆದರೆ ಪ್ರಯೋಜನವಾಗಲಿಲ್ಲ.
ಬಳಿಕ ಆತನ ಶವವನ್ನು ಮೀನುಗಾರರು ಪತ್ತೆ ಹಚ್ಚಿದರು. ಆದರೆ ಅದರ ಬಹುಭಾಗವನ್ನು ಮೊಸಳೆ ತಿಂದು ಹಾಕಿತ್ತು.
ಸುದ್ದಿ ತಿಳಿದು ಧಾವಿಸಿ ಬಂದ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ