ವಿಶಾಲಪಟ್ಟಣ ವಿಷಾನಿಲ ದುರಂತ : ದೋಷದಿಂದಲೇ ವಿಷಾನಿಲ ಸೋರಿಕೆ
Team Udayavani, May 12, 2020, 10:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಶಾಖಪಟ್ಟಣ: ಭೋಪಾಲ್ ಅನಿಲ ದುರಂತ ವನ್ನು ನೆನಪಿಸಿದ್ದ, ವಿಶಾಖಪಟ್ಟಣದ ಎಲ್ಜಿ ಪಾಲಿ ಮರ್ಸ್ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಲು ಮಾನವ ದೋಷವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢವಾಗಿದೆ.
ಆಂಧ್ರಪ್ರದೇಶದ ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ, ಕಳೆದ ಎರಡು ದಿನಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿ, ಈ ವರದಿ ನೀಡಿದೆ.
ಏನು ಕಾರಣ?: ಲಾಕ್ಡೌನ್ ಅವಧಿಯಲ್ಲಿ ಸ್ಟೈರೀನ್ ಟ್ಯಾಂಕ್ನಲ್ಲಿ ಸ್ವಯಂ ಪಾಲಿಮರೀಕರಣ ಪ್ರತಿರೋಧಕವನ್ನು ಸೇರಿಸುವಲ್ಲಿ ನಿರ್ಲಕ್ಷ್ಯ ತೋರಿರುವುದೇ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಅಲ್ಲದೆ, ಟ್ಯಾಂಕ್ನಲ್ಲಿ 20 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ತಾಪಮಾನ ಕಾಯ್ದುಕೊಳ್ಳುವಲ್ಲಿ ಕಾರ್ಖಾನೆ ವಿಫಲವಾಗಿದೆ. ‘ಕೂಲಿಂಗ್ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸದೆ ಇದ್ದದ್ದೇ, ಅಗಾಧ ಶಾಖ ಉತ್ಪಾದನೆಗೆ ಕಾರಣವಾಗಿದೆ’ ಎಂದು ಹಿರಿಯ ವಿಧಿ ವಿಜ್ಞಾನ ತಜ್ಞರೊಬ್ಬರು ಹೇಳಿದ್ದಾರೆ.
ಆಪರೇಟರ್ ಇರಲಿಲ್ಲ: ತಜ್ಞರು ಸ್ಥಳಕ್ಕೆ ಭೇಟಿ ನೀಡಿದ ದಿನ, ಸ್ಟೈರೀನ್ ಕುದಿವ ವಾತಾವರಣದಲ್ಲಿ 146 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿತ್ತು.
ಪ್ರತಿನಿತ್ಯ ಇಲ್ಲಿನ ವಿದ್ಯಮಾನ ಪರಿಶೀಲಿಸಲು ಒಬ್ಬರು ಆಪರೇಟರ್ ಅನ್ನು ಕೂರಿಸಬೇಕಿತ್ತು. ಆದರೆ, ಎಲ್ಜಿ ಪಾಲಿಮರ್ಸ್ ಅದನ್ನು ಮಾಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ