ವ್ಯಕ್ತಿಯೊಬ್ಬ ತನಗೇ ಹಾರಿಸಿಕೊಂಡ ಗುಂಡು, ತಲೆಯನ್ನು ಭೇದಿಸಿ ಗರ್ಭಿಣಿ ಪತ್ನಿಗೆ ತಗುಲಿತು!
Team Udayavani, May 24, 2020, 9:01 AM IST
ದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನಗೇ ತಾನೇ ಗುಂಡು ಹಾರಿಸಿಕೊಂಡಿದ್ದು, ಬುಲೆಟ್ ತಲೆಯ ಮೂಲಕ ಹೊರಬಂದು ಪಕ್ಕದಲ್ಲಿದ್ದ ಗರ್ಭಿಣಿ ಪತ್ನಿಗೆ ತಾಕಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಕಳೆದ ಶುಕ್ರವಾರ 34 ವರ್ಷದ ವ್ಯಕ್ತಿಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಪತ್ನಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ನಿರುದ್ಯೋಗದ ವಿಚಾರವಾಗಿ ಇಬ್ಬರಿಗೂ ಕಲಹವೇರ್ಪಟ್ಟಿದೆ. ಕೂಡಲೇ ಕಿವಿಯ ಬಳಿ ಪಿಸ್ತೂಲ್ ಇರಿಸಿಕೊಂಡು ವ್ಯಕ್ತಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾನೆ. ಆದರೇ ದುರಾದೃಷ್ಟವೆಂಬಂತೆ ಬುಲೆಟ್ ತಲೆಯಿಂದ ಹೊರಬಂದು ಪಕ್ಕದಲ್ಲಿ ಕುಳಿತಿದ್ದ ಪತ್ನಿಯ ಕುತ್ತಿಗೆ ಭಾಗಕ್ಕೆ ತಗುಲಿದೆ.
ಇದೀಗ ಗುಂಡು ಹಾರಿಸಿಕೊಂಡ ವ್ಯಕ್ತಿ ಜೀವನ್ಮರಣ ಸ್ಥಿತಿಯಲ್ಲಿ ದೆಹಲಿ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದು, ಆತನ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.
ಮನೇಸರ್ ನ ಉಪ ಪೋಲಿಸ್ ಆಯುಕ್ತ ದೀಪಕ್ ಸಹರನ್ ಈ ಕುರಿತು ಮಾಹಿತಿ ನೀಡಿ, ಬುಲೆಟ್ ವ್ಯಕ್ತಿಯ ಕಿವಿಯನ್ನು ಭೇದಿಸಿ ಹೊರಬಂದು ಇನ್ನೊಂದು ಬದಿಯಲ್ಲಿ ಕುಳಿತಿದ್ದ ಪತ್ನಿಯ ಕುತ್ತಿಗೆಗೆ ತಾಕಿದೆ. ಬ್ಯಾಲಿಸ್ಟಿಕ್ಸ್ ವರದಿಗಾಗಿ ಕಾಯುತ್ತಿದ್ದು ಏಫ್ ಐಆರ್ ದಾಖಲಿಸಲಾಗಿದೆ ಎಂದರು.
ದೇಹದ ಮೂಲಕ ಬುಲೆಟ್ ಹಾದು ಹೋಗಿ ಇನ್ನೊಬ್ಬ ವ್ಯಕ್ತಿಗೆ ಬಡಿಯುವುದು ಅಪರೂಪದ ಘಟನೆ, ಆದರೆ ಅಸಮಾನ್ಯವೇನಲ್ಲ. ವ್ಯಕ್ತಿಗಳು ಪರಸ್ಪರ ಹತ್ತಿರದಲ್ಲಿದ್ದರೆ ಇಂತಹ ಅಚಾತುರ್ಯಗಳಾಗುವ ಸಾಧ್ಯತೆಯಿದೆ. ಕೆಲವು ತಿಂಗಳುಗಳಿಂದ ನಿರುದ್ಯೋಗಿಯಾಗಿರುವ ಈ ವ್ಯಕ್ತಿಯ ಸ್ಥಿತಿ ಗಂಭೀರ ವಾಗಿದ್ದು, ಪತ್ನಿ ಸುರಕ್ಷಿತವಾಗಿದ್ದಾಳೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ದಂಪತಿಗಳು ಫರಿದಾಬಾದ್ ಮೂಲದವರಾಗಿದ್ದು, ಏಳು ತಿಂಗಳ ಗರ್ಭಿಣಿಯಾಗಿದ್ದ ಹೆಂಡತಿಯನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.ಇವರು 2019 ರಲ್ಲಿ ವಿವಾಹವಾಗಿದ್ದರು. ಘಟನೆ ನಡೆದ ನಂತರ ದಾರಿಹೋಕರೊಬ್ಬರು ಕಾರಿನೊಳಗೆ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ಮಹಿಳೆಯ ಹೇಳಿಕೆಯನ್ನು ಆಧರಿಸಿ ಏಫ್ ಐಆರ್ ದಾಖಲಿಸಿದ್ದು, ಆ ವ್ಯಕ್ತಿಗೆ ಬಂದೂಕಿಗೆ ಪರವಾನಗಿ ಇದೆಯೇ ಎಂದು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ