ಕ್ಷುಲ್ಲಕ ಜಗಳ : 25ರ ವ್ಯಕ್ತಿಗೆ 58 ಬಾರಿ ಇರಿದ ದುಷ್ಕರ್ಮಿಗಳು
Team Udayavani, Mar 2, 2018, 11:54 AM IST
ಹೊಸದಿಲ್ಲಿ : ದಿಲ್ಲಿಯ ಖಾನಾಪುರ ಪ್ರದೇಶದಲ್ಲಿ ನಿನ್ನೆ ಗುರುವಾರ ಸಂಜೆ 25ರ ಹರೆಯದ ವ್ಯಕ್ತಿಯೊಬ್ಬನನ್ನು ಬೈಕರ್ಗಳ ಗ್ಯಾಂಗ್ ಒಂದು 50 ಬಾರಿ ಮಾರಣಾಂತಿಕವಾಗಿ ಇರಿದ ಘಟನೆ ನಡೆದಿದೆ.
ತೀವ್ರ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನಿಗೆ ಕನಿಷ್ಠ 50 ಇರಿತಗಳಾಗಿರುವುದನ್ನು ವೈದ್ಯರು ದೃಢೀಕರಿಸಿದ್ದಾರೆ. ಹಲ್ಲೆ ಘಟನೆ ನಡೆಯುತ್ತಿದ್ದಾಗ ಪೊಲೀಸರಿಗೆ ಮಾಹಿತಿ ನೀಡಲಾಯಿತಾದರೂ ಅವರು ಅರ್ಧ ತಾಸಿನ ಬಳಿಕವಷ್ಟೇ ಸ್ಥಳಕ್ಕೆ ಬಂದಿದ್ದಾರೆ. ಆಶಿಶ್ನ ಸ್ಥಿತಿ ಗಂಭೀರವಿದೆ ಎಂದು ತಿಳಿದುಬಂದಿದೆ.
ಮಾರಣಾಂತಿಕ ಇರಿತಕ್ಕೆ ಗುರಿಯಾದ ವ್ಯಕ್ತಿಯನ್ನು ಆಶಿಶ್ ಎಂದು ಗುರುತಿಸಲಾಗಿದೆ. ಆತ ಜಿಮ್ನಿಂದ ಮರಳುತ್ತಿದ್ದಾಗ ಬೈಕರ್ಗಳ ಗ್ಯಾಂಗ್ ಆತನನ್ನು ತಡೆದು 50 ಬಾರಿ ಇರಿಯಿತು. ಈ ಇಡಿಯ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಪೊಲೀಸರು ಅದನ್ನು ವೀಕ್ಷಿಸಿ ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆಶಿಶ್ ಮೇಲೆ ಬೈಕರ್ ಗ್ಯಾಂಗ್ ಹಲ್ಲೆ ನಡೆಸಲು ಕಾರಣವೇನು ಎಂಬುದು ಖಚಿತವಾಗಿ ಗೊತ್ತಾಗಿಲ್ಲ.
ಆದರೆ ಸ್ಥಳೀಯರು ಹೇಳಿರುವ ಪ್ರಕಾರ ಆಶಿಶ್ ಹಿಂದಿನ ದಿನ, ಹೋಳಿ ಹಬ್ಬಕ್ಕೆ ಮುನ್ನ, ನೀರಿನ ಬಲೂನ್ ಎಸೆದಿದ್ದ ಬಾಲಕನ ಮೇಲೆ ಕೆಲವು ವ್ಯಕ್ತಿಗಳು ಯದ್ದಾತದ್ವಾ ಹಲ್ಲೆ ನಡೆಸುತ್ತಿದ್ದುದನ್ನು ಕಂಡು ತಡೆದಿದ್ದ; ಇದೇ ಕಾರಣಕ್ಕೆ ಬೈಕರ್ಗಳ ಗ್ಯಾಂಗ್ ಆಶಿಶ್ ವಿರುದ್ಧ ಸೇಡು ತೀರಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ