ತುಂಬಿ ಹರಿಯುತ್ತಿರುವ ನದಿಗೆ ಮೂವರು ಪುತ್ರರನ್ನು ಎಸೆದ ಅಪ್ಪ, ಬಳಿಕ ತಾನೂ ಹಾರಿದ !
Team Udayavani, Aug 16, 2020, 7:37 PM IST
ಸಾಂಧರ್ಭಿಕ ಚಿತ್ರ ಬಳಸಲಾಗಿದೆ
ರಾಯಗಢ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಮೂವರು ಗಂಡು ಮಕ್ಕಳನ್ನು ನದಿಗೆಸೆದು ಬಳಿಕ ತಾನೂ ಹಾರಿದ ಘಟನೆ ಚತ್ತಿಸ್ ಗಢದ ರಾಯಗಢದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇಂದು ಮುಂಜಾನೆ ಈ ಘಟನೆ ನಡೆದಿದ್ದು ವ್ಯಕ್ತಿಯೊಬ್ಬ ಮಾಂಡ್ ನದಿಯ ಸೇತುವೆಯಿಂದ ತನ್ನ ಮೂವರು ಮಕ್ಕಳನ್ನು ನದಿಗೆಸೆದು ಬಳಿಕ ತಾನೂ ಹಾರಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಅದಾಗ್ಯೂ ಭಾರೀ ಮಳೆ ಇರುವ ಕಾರಣದಿಂದ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ.
ನದಿಗೆ ಹಾರಿದಾತನನ್ನು ಕಾರ್ತಿಕೇಶ್ವರ ರತಿಯಾ ಎಂದು ಗುರುತಿಸಲಾಗಿದ್ದು ಎಡು ಗ್ರಾಮದವನಾಗಿದ್ದಾನೆ. ಈತ ತನ್ನ ಪುತ್ರರಾದ ಖೀರ್ಸಾಗರ್ (5), ನರ್ಮದಾ (3) ಮತ್ತು ಎಂಟು ತಿಂಗಳ ತೇಜ್ ಪ್ರಕಾಶ್ ಅವರೊಂದಿಗೆ ಬೈಕ್ ನಲ್ಲಿ ಬರ್ರಾ ಗ್ರಾಮಕ್ಕೆ ತೆರಳಿದ್ದಾನೆ. ಆದರೇ ಮಾಂಡ್ ನದಿ ಸಮೀಪಿಸುತ್ತಿದ್ದಂತೆ ಬೈಕ್ ನಿಲ್ಲಿಸಿ ಮೂವರು ಮಕ್ಕಳನ್ನು ನದಿಗೆಸೆದು ಬಳಿಕ ತಾನೂ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಮುಳುಗು ತಜ್ಞರು ಕಾರ್ಯಚರಣೆ ನಡೆಸುತ್ತಿದ್ದು ಇಲ್ಲಿಯವರೆಗೂ ಯಾರು ಕೂಡ ಪತ್ತೆಯಾಗಿಲ್ಲ ಎಂದು ಎನ್ ಡಿ ಟಿವಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ