ಮಾನವ ಅಸ್ಥಿಪಂಜರ ವಶ


Team Udayavani, Nov 29, 2018, 6:41 AM IST

v-6.jpg

ಪಟ್ನಾ: ಅಬ್ಬಬ್ಟಾ ಬರೋಬ್ಬರಿ 50 ಅಸ್ಥಿಪಂಜರಗಳ ಸಾಗಾಟ! ಹೌದು, ಇಂಥದ್ದೊಂದು ಪ್ರಕರಣ ಬಿಹಾರ ದಲ್ಲಿ ಬೆಳಕಿಗೆ ಬಂದಿದೆ. ರೈಲಿನಲ್ಲಿ ಸುಮಾರು 50 ಮಾನವ ಅಸ್ಥಿಪಂಜರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಸಂಜಯ್‌ ಪ್ರಸಾದ್‌(29)ನನ್ನು ಇಲ್ಲಿನ ಸರಣ್‌ ಪ್ರಾಂತ್ಯದ ಚಾಪ್ರಾ ರೈಲು ನಿಲ್ದಾಣ ದಲ್ಲಿ ವಶಕ್ಕೆ ಪಡೆಯಲಾಗಿದೆ. ಪೂರ್ವ ಚಂಪಾರಣ್‌ ಜಿಲ್ಲೆಯವನಾದ ಈತ ಬಲ್ಲಿಯಾ- ಸೆಲ್ಡಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಚಾಪ್ರಾ ರೈಲು ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ತಪಾಸಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾನೆ.

61 ತಲೆಬುರುಡೆ, 50 ಅಸ್ಥಿಪಂಜರ!
ಬಂಧಿತ ಸಂಜಯ್‌ನಿಂದ 61 ಮಾನವ ತಲೆ ಬುರುಡೆಗಳು, 50 ಅಸ್ಥಿಪಂಜರಗಳು, ಭೂತಾನ್‌ ದೇಶದ ಕರೆನ್ಸಿ, ಭೂತಾನ್‌ ಸಹಿತ ವಿವಿಧ ದೇಶಗಳ ಸಿಮ್‌ ಕಾರ್ಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ತಲೆಬುರುಡೆ ಮತ್ತು ಅಸ್ಥಿಪಂಜರಗಳನ್ನು ಉತ್ತರ ಪ್ರದೇಶದ ಬಲ್ಲಿಯಾ ಪ್ರಾಂತ್ಯದಿಂದ ಸಂಗ್ರಹಿಸಲಾಗಿದ್ದು, ಭೂತಾನ್‌ನಲ್ಲಿರುವ ಮಂತ್ರವಾದಿಗಳಿಗೆ ನೀಡಲು ಕೊಂಡೊಯ್ಯುತ್ತಿದ್ದುದಾಗಿ ತಿಳಿಸಿದ್ದಾನೆ. ಈತನ ಹಿಂದೆ ದೊಡ್ಡ ತಂಡವೇ ಇರುವುದು ಬೆಳಕಿಗೆ ಬಂದಿದೆ.

ಪಾಶ್ಚಾತ್ಯ ರಾಷ್ಟ್ರಗಳಲ್ಲೂ  ಬೇಡಿಕೆ
ಭೂತಾನ್‌ನ ಮಂತ್ರವಾದಿಗಳಿಗಷ್ಟೇ ಅಲ್ಲ ಅಮೆರಿಕ, ಯೂರೋಪ್‌, ಚೀನ ಸಹಿತ ಹಲವಾರು ರಾಷ್ಟ್ರಗಳಲ್ಲಿನ ವೈದ್ಯಕೀಯ ಕಾಲೇಜುಗಳಲ್ಲಿ, ಮಾನವ ಅಸ್ಥಿಪಂಜರಗಳಿಗೆ, ಅದರಲ್ಲೂ ಭಾರತದ ಅಸ್ಥಿಪಂಜರಗಳಿಗೆ ಅಪಾರ ಬೇಡಿಕೆಯಿದೆ. ವೈದ್ಯಕೀಯ ಪಠ್ಯ ಪುಸ್ತಕ ಗಳಲ್ಲಿ ನೀಡಲಾಗಿರುವ ಮಾನವ ದೇಹ ರಚನೆ ವಿವರಣೆಗೆ ಪೂರಕವಾಗಿ ಹೇಳಿ ಮಾಡಿಸಿದಂಥ ಆಕಾರ, ಗುಣಮಟ್ಟ ಹೊಂದಿರುವುದರಿಂದ ಭಾರತದ ಅಸ್ಥಿಪಂಜರಗಳಿಗೆ ಭಾರೀ ಬೇಡಿಕೆಯಿದೆ. ಇನ್ನು, ಬ್ರಿಟಿಷರ ಕಾಲದಿಂದಲೂ ಭಾರತವು ವಿಶ್ವಸಮುದಾಯಕ್ಕೆ ಅಸ್ಥಿ ಪಂಜರಗಳ ಪ್ರಮುಖ ಸರಬರಾಜುದಾರ ಎನಿಸಿಕೊಂಡಿದೆ. 1985ರಲ್ಲಿ ಅಸ್ಥಿ ಪಂಜರಗಳ ಸಾಗಣೆ ಶಿಕ್ಷಾರ್ಹ ಅಪರಾಧ ಎಂದು ಭಾರತ ಘೋಷಿಸಿದ್ದರಿಂದ ಈಗ ಇವು ಕಳ್ಳಸಾಗಣೆಯಾಗುತ್ತಿವೆ.

ಎಷ್ಟೆಷ್ಟು  ರೇಟ್‌?
ಪಾಶ್ಚಾತ್ಯ ದೇಶಗಳಲ್ಲಿ  ದೇಹದ ಒಂದೊಂದು ಮೂಳೆಗೂ ಒಂದೊಂದು ರೀತಿಯ ರೇಟ್‌ ಇದೆ. ಸದ್ಯಕ್ಕೆ ಅಮೆರಿಕ ವೈದ್ಯಕೀಯ ವಿದ್ಯಾಲಯಗಳು ನೀಡುವ ದರ ಪಟ್ಟಿ  ಇಲ್ಲಿ  ನೀಡಲಾಗಿದೆ.

ಬಿಡಿಭಾಗ                         ದರ (ಅಂದಾಜು ರೂ.ಗಳಲ್ಲಿ )
ಪೂರ್ತಿ ಅಸ್ಥಿಪಂಜರ                 2,25,000
ಅರ್ಧ ಅಸ್ಥಿಪಂಜರ                   1,82,000
ಬುರುಡೆಯ ಚಿಪ್ಪು                    8,200
ಕುತ್ತಿಗೆ ಮೂಳೆ                         9,500
ಬೆನ್ನುಮೂಳೆ                           28,300
ಕೈ ಬೆರಳು                               14,000

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.