ಬಡಗಾಂವ್ ಐಎಎಫ್ ನೆಲೆಗೆ ನುಗ್ಗಲು ಯತ್ನ: ಅಪರಿಚಿತನಿಗೆ ಗುಂಡು
Team Udayavani, Feb 19, 2018, 11:29 AM IST
ಜಮ್ಮು : ಜಮ್ಮು ಕಾಶ್ಮೀರದ ಬಡಗಾಂವ್ ಜಿಲ್ಲೆಯಲ್ಲಿನ ಭಾರತೀಯ ವಾಯು ಪಡೆಯ ಮೂಲ ಠಾಣೆಯ ಭದ್ರತಾ ವಲಯವನ್ನು ದಾಟಿ ಒಳಬರಲು ಯತ್ನಿಸಿದ ಅಪರಿಚಿತ ವ್ಯಕ್ತಿಯನ್ನು ಇಂದು ಸೋಮವಾರ ನಸುಕಿನ ವೇಳೆ ಭದ್ರತಾ ಪಡೆಗಳು ಗುಂಡೆಸೆದು ಹೊಡೆದುರುಳಿಸಿದ ಘಟನೆ ವರದಿಯಾಗಿದೆ.
ಮಧ್ಯರಾತ್ರಿ ಕಳೆದ ಸ್ವಲ್ಪ ಹೊತ್ತಿನ ಬಳಿಕ ಅಪರಿಚಿತ ವ್ಯಕ್ತಿಯೊಬ್ಬನು ಐಎಎಫ್ ವಾಯು ನೆಲೆಯ ಪೆರಿಮೀಟರ್ ಗೋಡೆಯನ್ನು ಹತ್ತಿ ಒಳಬರಲು ಯತ್ನಿಸಿದ. ಇದನ್ನು ಕಂಡ ಸೆಂಟ್ರಿ ಆತನಿಗೆ ಎಚ್ಚರಿಕೆಯ ಗುಂಡೆಸೆದರು. ಆದರೂ ಅದನ್ನು ಲೆಕ್ಕಿಸದೆ ಆತ ಗೋಡೆ ಏರಲು ಮುಂದಾದ. ಆಗ ಭದ್ರತಾ ಪಡೆಗಳು ಆತನನ್ನು ಗುಂಡಿಕ್ಕಿ ಸಾಯಿಸಿದವು ಎಂದು ಎಎನ್ಐ ವರದಿ ಮಾಡಿದೆ.
ತಾಜಾ ವರದಿಗಳ ಪ್ರಕಾರ ಈ ಅಪರಿಚಿತ ವ್ಯಕ್ತಿಯು ಮಾನಸಿಕವಾಗಿ ಅಸ್ವಸ್ಥನೆಂದು ಗೊತ್ತಾಗಿದೆ. ಸ್ಥಳ ಪರೀಕ್ಷೆಯ ಪ್ರಕಾರ ವ್ಯಕ್ತಿಯು ಸುಮಾರು 50 ರಿಂದ 55 ವರ್ಷ ಪ್ರಾಯದೊಳಗಿನವನಾಗಿದ್ದು ಮನೋರೋಗಿಯಂತೆ ಆತ ಕಾಣುತ್ತಿದ್ದ ಎಂದು ತಿಳಿದುಬಂದಿದೆ.
ಈ ಘಟನೆಯ ಬಗ್ಗೆ ಭದ್ರತಾ ಅಧಿಕಾರಿಗಳು ಹುಮ್ಹಮಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು; ಒಡನೆಯೇ ಅವರು ಸ್ಥಳಕ್ಕೆ ಧಾವಿಸಿ ಬಂದರು.
ಭದ್ರತಾ ಪಡೆಗಳ ಗುಂಡೇಟಿಗೆ ಮೃತಪಟ್ಟ ಅಪರಿಚಿತ ವ್ಯಕ್ತಿಯ ಕಾಲಿಗೆ ಪಾದರಕ್ಷೆ ಇರಲಿಲ್ಲ. ಚಳಿಗಾಲದ ಉಡುಪನ್ನೂ ಆತ ಧರಿಸಿರಲಿಲ್ಲ ಮತ್ತು ಆತನ ಬಳಿ ಯಾವುದೇ ಗುರುತು ಪತ್ರವೂ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ