ಸಿಎಎ ವಿರೋಧಿ ಹೋರಾಟ ಹಿಂಸೆ: ಪೊಲೀಸರತ್ತ ಗುಂಡು ಹಾರಿಸಿದ ವ್ಯಕ್ತಿಯ ಬಂಧನ
Team Udayavani, Feb 25, 2020, 3:48 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾರೂಪ ತಾಳಿದೆ ಮತ್ತು ಈ ಹಿಂಸೆಗೆ ಈಗಾಗಲೇ ಏಳು ಜನರು ಬಲಿಯಾಗಿದ್ದಾರೆ.
ಈ ನಡುವೆ ಉತ್ತರ ದೆಹಲಿ ಭಾಗದಲ್ಲಿ ಪೊಲೀಸರತ್ತ ಗುಂಡು ಹಾರಿಸಿದ್ದ ಕೆಂಪು ಟೀ ಶರ್ಟ್ ಧಾರಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಶಾರುಖ್ ಎಂದು ಗುರುತಿಸಲಾಗಿದೆ.
ಪೊಲೀಸರತ್ತ ಗುಂಡು ಹಾರಿಸಿರುವ ವ್ಯಕ್ತಿಯನ್ನು ಬಂಧಿಸಿರುವ ವಿಚಾರವನ್ನು ದೆಹಲಿ ಪೊಲೀಸರು ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರು ಹಾಗೂ ಕಾಯ್ದೆ ಬೆಂಬಲಿಸಿ ಹೋರಾಟ ನಡೆಸುತ್ತಿದ್ದವರ ನಡುವೆ ಘರ್ಷಣೆ ಸಂಭವಿಸಿ ಇದುವರೆಗೆ 76 ಜನರು ಗಾಯಗೊಂಡಿದ್ದಾರೆ. ದೆಹಲಿಯ ಈಶಾನ್ಯ ಭಾಗದ ಒಟ್ಟು ಹತ್ತು ಕಡೆಗಳಲ್ಲಿ ಈಗಾಗಲೇ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿದೆ.
ಜಾಫರಾಬಾದ್, ಮೌಜ್ ಪುರ, ಬಾಬರ್ ಪುರ, ಗೋಕುಲ್ ಪುರಿ, ಜೋಹ್ರಿ ಎನ್ಕ್ಲೇವ್ ಮತ್ತು ಶಿವ ವಿಹಾರಿ ಪ್ರದೇಶಗಳಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ