ಪ್ರೇಮಿಗಳ ದಿನದಂದೇ ಏಳು ರಾಜ್ಯಗಳಲ್ಲಿ 14 ವಿವಾಹವಾಗಿದ್ದ ಬಹುಪತ್ನಿ ಪ್ರೇಮಿಯ ಬಂಧನ
Team Udayavani, Feb 15, 2022, 10:32 AM IST
ಭುವನೇಶ್ವರ: ಏಳು ರಾಜ್ಯಗಳಲ್ಲಿ 14 ವಿವಾಹವಾಗಿದ್ದ 48 ವರ್ಷದ ಬಹುಪತ್ನಿ ಪ್ರೇಮಿಯನ್ನು ಸೋಮವಾರ ಒಡಿಶಾದ ಭುವನೇಶ್ವರದಲ್ಲಿ ಬಂಧಿಸಲಾಗಿದೆ.
ಒಡಿಶಾದ ಕೇಂದ್ರಪಾರ ಜಿಲ್ಲೆಯ ಪಟ್ಕುರಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ಈ ವ್ಯಕ್ತಿ ಮಹಿಳೆಯರಿಂದ ಹಣ ದೋಚಿ ಓಡಿಹೋಗುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಬಂಧಿತ ವ್ಯಕ್ತಿ ಆರೋಪವನ್ನು ನಿರಾಕರಿಸಿದ್ದಾನೆ.
ಆರೋಪಿಯು 1982 ರಲ್ಲಿ ಮೊದಲ ಬಾರಿಗೆ ಮದುವೆಯಾಗಿದ್ದು, 2002 ರಲ್ಲಿ ಎರಡನೇ ವಿವಾಹವಾಗಿದ್ದ. ಈ ಎರಡು ಮದುವೆಗಳಿಂದ ಐದು ಮಕ್ಕಳನ್ನೂ ಪಡೆದಿದ್ದಾನೆ ಎಂದು ಭುವನೇಶ್ವರ ಪೊಲೀಸ್ ಉಪ ಆಯುಕ್ತ ಉಮಾಶಂಕರ್ ದಾಸ್ ಹೇಳಿದ್ದಾರೆ. 2002 ಮತ್ತು 2020 ರ ನಡುವೆ, ಅವರು ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳ ಮೂಲಕ ಇತರ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿ ವಿವಾಹವಾಗಿದ್ದಾನೆ ಎಂದು ದಾಸ್ ಹೇಳಿದ್ದಾರೆ.
ಸದ್ಯ ಈ ಬಹುಪತ್ನಿ ವಲ್ಲಭ ದೆಹಲಿಯಲ್ಲಿ ಶಾಲಾ ಶಿಕ್ಷಕಿಯಾಗಿರುವ ತನ್ನ ಕೊನೆಯ ಪತ್ನಿಯೊಂದಿಗೆ ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನೆಲೆಸಿದ್ದಾನೆ. ಆಕೆಗೆ ಹೇಗೋ ಆತನ ಹಿಂದಿನ ಮದುವೆಗಳ ಬಗ್ಗೆ ತಿಳಿದು ಪೊಲೀಸರಿಗೆ ದೂರು ನೀಡಿದ್ದಾಳೆ.
ಇದನ್ನೂ ಓದಿ:ಸಿನಿಮೀಯ ರೀತಿ ಕಳ್ಳತನ: ಮನೆಯವರನ್ನು ಕಟ್ಟಿಹಾಕಿ ಚಿನ್ನಾಭರಣ ಕಳವು
ಅವನು ಮಧ್ಯವಯಸ್ಕ ಒಂಟಿ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ, ಹೆಚ್ಚಾಗಿ ಮ್ಯಾಟ್ರಿಮೋನಲ್ ವೆಬ್ಸೈಟ್ಗಳಲ್ಲಿ ವಿಚ್ಛೇದಿತರಿಗೆ ಗಾಳ ಹಾಕಿ, ನಂತರ ಅವರನ್ನು ವಿವಾಹವಾಗಿ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್