ವೀಸಾ ಪ್ರಕ್ರಿಯೆಯಲ್ಲಿ ವಿಳಂಬ ; ಮಹಿಳಾ ಉದ್ಯೋಗಿಯ ಕುತ್ತಿಗೆಗೆ ಇರಿದ ವ್ಯಕ್ತಿ
Team Udayavani, Jan 24, 2023, 4:24 PM IST
ಕೊಚ್ಚಿ: ವಿದೇಶಕ್ಕೆ ಪ್ರಯಾಣಿಸಲು ತನ್ನ ವೀಸಾ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಸಂಬಂಧಿಸಿದಂತೆ ವಿವಾದದ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಟ್ರಾವೆಲ್ ಏಜೆನ್ಸಿಯ ಮಹಿಳಾ ಉದ್ಯೋಗಿಯೊಬ್ಬರ ಕುತ್ತಿಗೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.
ಇರಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆಯನ್ನು ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದ್ದು, ಸದ್ಯ ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ವ್ಯಕ್ತಿ ತನ್ನ ವೀಸಾ ಸ್ಥಿತಿಯನ್ನು ವಿಚಾರಿಸಲು ಟ್ರಾವೆಲ್ ಏಜೆನ್ಸಿಯನ್ನು ತಲುಪಿದಾಗ ಘಟನೆ ನಡೆದಿದೆ. ಟ್ರಾವೆಲ್ ಏಜೆನ್ಸಿ ಮಾಲಕನ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಚಾಕು ಹೊತ್ತೊಯ್ದಿದ್ದ. ಮಾಲಕ ಅಲ್ಲಿಲ್ಲ ಎಂದು ಮಹಿಳಾ ಉದ್ಯೋಗಿ ಹೇಳಿದಾಗ ಆತ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯು ತನ್ನ ವೀಸಾಕ್ಕಾಗಿ ಟ್ರಾವೆಲ್ ಏಜೆನ್ಸಿಗೆ ಸ್ವಲ್ಪ ಹಣವನ್ನು ಪಾವತಿಸಿದ್ದ ಮತ್ತು ವಿಳಂಬವಾಗಿದ್ದು ಘಟನೆಗೆ ಕಾರಣವೆಂದು ತೋರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ