ಸಾಗರದ ಪಾಲಾಗಲಿದೆಯೇ ಮಂಗಳೂರು?


Team Udayavani, Nov 17, 2017, 6:00 AM IST

waves.jpg

ಹೊಸದಿಲ್ಲಿ: ಜಾಗತಿಕ ತಾಪಮಾನ ಏರಿಕೆಯಿಂದ ಸಮುದ್ರದ ನೀರಿನ ಮಟ್ಟ ಏರಿಕೆ ಯಾದರೆ ಭಾರತದಲ್ಲಿ ಮೊದಲು ಮುಳುಗುವ ನಗರವೆಂದರೆ ಅದು ಮಂಗಳೂರು!

ತಾಪಮಾನ ಏರಿಕೆಯಿಂದ ಅಂಟಾರ್ಟಿಕಾ ಮತ್ತು ಗ್ರೀನ್‌ಲಾÂಂಡ್‌ನ‌ಲ್ಲಿರುವ ನೀರ್ಗಲ್ಲು ಕರಗಲು ಶುರುವಾಗಿದ್ದು, ಇದು ಹೀಗೆಯೇ ಮುಂದುವರಿದರೆ ಇಡೀ ಭೂಮಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ನಾಸಾ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.
ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರೇ ಏಕೆ?: ಅಂಟಾರ್ಟಿಕಾ ಮತ್ತು ಗ್ರೀನ್‌ಲಾÂಂಡ್‌ನ‌ಲ್ಲಿ ಹಿಮ ಕರಗಿದೊಡನೆಯೇ ಇಡೀ ಭೂಮಿಯಲ್ಲಿರುವ ಎಲ್ಲ ಕರಾವಳಿ ನಗರಗಳು ಒಮ್ಮೆಗೇ ಮುಳುಗುವುದಿಲ್ಲ. ಇದಕ್ಕೆ ಸ್ಥಳೀಯ ಸಂಗತಿಗಳೂ ಕಾರಣವಾಗುತ್ತವೆ. ಭಾರತದ ಲೆಕ್ಕಾಚಾರದಲ್ಲಿ ಸ್ಥಳೀಯವಾಗಿ ಸಮುದ್ರದ ಮಟ್ಟ ಹೆಚ್ಚಿರುವುದು ಮಂಗಳೂರಿ ನಲ್ಲೇ. ಇಲ್ಲಿನ ಸಮುದ್ರ ಮಟ್ಟ 1.598 ಎಂ.ಎಂ. ಇದೆ. ಅದೇ ಮುಂಬಯಿಯಲ್ಲಿ ಸ್ಥಳೀಯವಾಗಿ ಸಮುದ್ರದ ಮಟ್ಟ 1.526 ಎಂ.ಎಂ. ಇದೆ. ಹೀಗಾಗಿ ಮುಂಬಯಿಗಿಂತ ಮೊದಲು ಮಂಗಳೂರು ನೀರು ಪಾಲಾಗುತ್ತದೆ ಎಂಬುದು ಈ ತಂಡದ ತಜ್ಞರ ಮಾತು.

ಜತೆಗೆ ಅಂಟಾರ್ಟಿಕಾ ಇರಲಿ ಅಥವಾ ಗ್ರೀನ್‌ಲಾÂಂಡೇ ಇರಲಿ, ಇಲ್ಲಿನ ಹಿಮ ಕರಗುವುದರಿಂದ ಮಂಗಳೂರಿಗೆ ಅಪಾಯ ಖಾತ್ರಿ. ಆದರೆ ಅಂಟಾರ್ಟಿಕಾದ ಪಶ್ಚಿಮ ಭಾಗ ಮತ್ತು ಗ್ರೀನ್‌ಲಾÂಂಡ್‌ನ‌ ದಕ್ಷಿಣ ಭಾಗದ ಹಿಮ ಪದರಗಳು ಕರಗಿದರೆ ಮಾತ್ರ ಇನ್ನೂ ಹೆಚ್ಚಿನ ಅಪಾಯ ಕಾದಿದೆ ಎಂಬುದು ಈ ಸಂಶೋಧನೆಯ ಸಾರಾಂಶ.

ಮುಳುಗಡೆ ಹೇಗೆ?
ತಾಪಮಾನ ಏರಿಕೆಯಿಂದಾಗಿ ಹಿಮ ಕರಗಿ ಸಮುದ್ರದ ನೀರಿನ ಮಟ್ಟ ಹೆಚ್ಚಾಗು ತ್ತದೆ ಎಂಬುದು ಈಗಾಗಲೇ ಗೊತ್ತಿರುವ ಸತ್ಯ. ಅಂದರೆ ಇಡೀ ಭೂಮಿಯ ಶೇ. 75 ರಷ್ಟು ಶುದ್ಧ ನೀರಿನ ಮಂಜುಗಡ್ಡೆ ಸಾಂದ್ರೀಕರಿಸಿರುವುದು ಗ್ರೀನ್‌ಲಾÂಂಡ್‌ ಮತ್ತು ಅಂಟಾರ್ಟಿಕಾದಲ್ಲೇ. ಈ ಹಿಮ ಈಗಾಗಲೇ ಕರಗಲು ಶುರುವಾಗಿದ್ದು ನಿಧಾನ ಗತಿಯಲ್ಲಿ  ಸಮುದ್ರದ ನೀರೂ ಹೆಚ್ಚುತ್ತಿದೆ. ಆದರೆ ಗ್ರೀನ್‌ಲಾÂಂಡ್‌ ನಲ್ಲಿರುವ ಹಿಮ ಕರಗಿದರೆ ಯಾವ ಭಾಗ ಮುಳುಗುತ್ತದೆ ಅಥವಾ ಅಂಟಾರ್ಟಿಕಾ ದಲ್ಲಿರುವ ಹಿಮ ಕರಗಿದರೆ ಯಾವ ನಗರ ಗಳು ಮೊದಲು ಮುಳುಗುತ್ತವೆ ಎಂಬುದನ್ನು ಈ ಜಿಎಫ್ಎಂ ಸಾಧನ ತಿಳಿಸುತ್ತದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.