Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ


Team Udayavani, Jun 2, 2023, 7:05 AM IST

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂಫಾಲ್‌/ಹೊಸದಿಲ್ಲಿ: ಮಣಿಪುರದಲ್ಲಿ ಕಳೆದ ತಿಂಗಳು ಆರಂಭವಾದ ಹಿಂಸಾಚಾರವು ಈವರೆಗೆ 80 ಮಂದಿಯನ್ನು ಬಲಿತೆಗೆದುಕೊಂಡಿರುವುದಲ್ಲದೇ, ಪದೇಪದೆ ಗಲಭೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಗುರುವಾರ ಪೊಲೀಸ್‌ ಇಲಾಖೆಯಲ್ಲಿ ದೊಡ್ಡಮಟ್ಟದ ಬದಲಾವಣೆಯನ್ನು ಮಾಡಿದೆ.

ಮಣಿಪುರ ಪೊಲೀಸ್‌ ಮುಖ್ಯಸ್ಥರಾಗಿದ್ದ ಪಿ.ದೌಂಗೆಲ್‌ರನ್ನು ಗೃಹ ಇಲಾಖೆಗೆ ಎತ್ತಂಗಡಿ ಮಾಡಿ, ತ್ರಿಪುರ ಕೇಡರ್‌ನ ಐಪಿಎಸ್‌ ಅಧಿಕಾರಿ ರಾಜೀವ್‌ ಸಿಂಗ್‌ರನ್ನು ರಾಜ್ಯದ ಹೊಸ ಪೊಲೀಸ್‌ ಮಹಾನಿರ್ದೇಶಕ(ಡಿಜಿಪಿ)ರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಬುಡಕಟ್ಟೇತರ ಹಾಗೂ ಮೈತೇಯಿ ಸಮುದಾಯದವರಲ್ಲದ ಪೊಲೀಸ್‌ ಮುಖ್ಯಸ್ಥರನ್ನು ಮಣಿಪುರಕ್ಕೆ ನೇಮಿಸುವ ಮೂಲಕ ಸಂಭಾವ್ಯ ವಿವಾದವನ್ನು ತಡೆಯುವ ಕೆಲಸವನ್ನೂ ಕೇಂದ್ರ ಗೃಹ ಸಚಿವಾಲಯ ಮಾಡಿದೆ. ಸಿಂಗ್‌ ಅವರು ಈ ಹಿಂದೆ ಸಿಆರ್‌ಪಿಎಫ್ ಐಜಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಮಣಿಪುರ ಭೇಟಿ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆದಿದೆ.

ಮೇ 3ರಂದು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಸಮಯದಲ್ಲಿ ಕೇಂದ್ರ ಸರಕಾರವು ಸಿಆರ್‌ಪಿಎಫ್ನ ಮಾಜಿ ಮುಖ್ಯಸ್ಥ ಕುಲದೀಪ್‌ ಸಿಂಗ್‌ರನ್ನು ಮಣಿಪುರ ಸರಕಾರದ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಿತ್ತು.

ಗುಂಡಿನ ಚಕಮಕಿ, ಮೂವರು ಪೊಲೀಸರಿಗೆ ಗಾಯ: ಬಿಷ್ಣುಪುರ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಕುಂಬಿ ಪೊಲೀಸ್‌ ಠಾಣೆ ವ್ಯಾಪ್ತಿಯ ಟಾಂಗ್‌ಜೆಂಗ್‌ನಲ್ಲಿ ಈ ಚಕಮಕಿ ನಡೆದಿದೆ.

ತನಿಖೆಗೆ ಸಮಿತಿ
ಹಿಂಸಾಚಾರ ಕುರಿತ ತನಿಖೆಗಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿಯೊಬ್ಬರ ನೇತೃತ್ವದ ಸಮಿತಿಯನ್ನು ರಚಿಸುವುದಾಗಿ ಸಚಿವ ಶಾ ಘೋಷಿಸಿದ್ದಾರೆ. ಅಲ್ಲದೇ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ರಾಜ್ಯಪಾಲರು, ಭದ್ರತಾ ಸಲಹೆಗಾರ ಕುಲದೀಪ್‌ ಸಿಂಗ್‌ ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಒಳಗೊಂಡ ಶಾಂತಿ ಸಮಿತಿಯನ್ನು ರಚಿಸುವ ನಿರ್ಧಾರವನ್ನೂ ಕೈಗೊಂಡಿದ್ದಾರೆ. ಹಿಂಸೆಗೆ ಸಂಚು ರೂಪಿಸಿದ 6 ಪ್ರಕರಣ ಗಳನ್ನು ಮಾತ್ರ ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.

ಸಚಿವ ಶಾ ಖಡಕ್‌ ಎಚ್ಚರಿಕೆ
4 ದಿನಗಳ ಮಣಿಪುರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಕುಕಿ ಬಂಡುಕೋರರ ಗುಂಪಿಗೆ ಖಡಕ್‌ ಎಚ್ಚರಿಕೆ ರವಾನಿಸಿದ್ದಾರೆ. ಕಾರ್ಯಾಚರಣೆ ಸ್ಥಗಿತ ಒಪ್ಪಂದ (ಸಸ್ಪೆನ್ಶನ್‌ ಆಫ್ ಆಪರೇಶ‌ನ್‌)ವನ್ನು ಯಾರೇ ಉಲ್ಲಂ ಸಿದರೂ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಶಾಂತಿ ಮರಳಬೇಕೆಂದರೆ ಪ್ರತಿಯೊಬ್ಬರು ಒಪ್ಪಂದವನ್ನು ಚಾಚೂತಪ್ಪದೇ ಪಾಲಿಸಬೇಕು ಎಂದಿದ್ದಾರೆ. ಶಸ್ತ್ರಾಸ್ತ್ರ ಕೋಠಿಯಿಂದ ಲೂಟಿ ಮಾಡಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಕುಕಿ ಬಂಡುಕೋರರಿಗೆ ಹಸ್ತಾಂತರಗೊಂಡಿರುವ ಸಾಧ್ಯತೆಯಿದೆ ಎಂದು ರಾಜ್ಯ ಸರಕಾರ ಮತ್ತು ಗುಪ್ತಚರ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾ ಈ ಎಚ್ಚರಿಕೆ ನೀಡಿದ್ದಾರೆ. ಶಸ್ತ್ರಾಸ್ತ್ರಗಳನ್ನು ಮರಳಿಸದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ.

ಟಾಪ್ ನ್ಯೂಸ್

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

karnataka bund

Cauvery: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.