ತನಿಖೆ ನೆಪದಲ್ಲಿ ಸಿಬಿಐ ಅಧಿಕಾರಿಗಳಿಂದ ಮನೀಶ್ ಸಿಸೋಡಿಯಾ ಗೆ ಮಾನಸಿಕ ಹಿಂಸೆ: ಆಪ್ ಆರೋಪ
Team Udayavani, Mar 5, 2023, 9:45 PM IST
ನವದೆಹಲಿ : ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಕೇಂದ್ರ ತನಿಖಾ ದಳ ತನಿಖೆ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ ಎಂದು ಆಪ್ ಆರೋಪಿಸಿದೆ.
ಈ ಕುರಿತು ಮಾತನಾಡಿದ ಆಪ್ ಹಿರಿಯ ನಾಯಕ ಸಂಜಯ್ ಸಿಂಗ್ ಅಕ್ರಮ ಅಬಕಾರಿ ನೀತಿಗೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಆಪ್ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ವಶಕ್ಕೆ ಪಡೆದುಕೊಂಡು ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಬಲವಂತ ಮಾಡುತ್ತಿದ್ದಾರೆ, ಅಲ್ಲದೆ ಖಾಲಿ ಕಾಗದದಲ್ಲಿ ಸಹಿ ಹಾಕುವಂತೆಯೂ ಒತ್ತಾಯ ಮಾಡುತ್ತಿದ್ದಾರೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ಸಿಸೋಡಿಯಾ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲದೆ ಅಧಿಕಾರಿಗಳು ಸುಖಾ ಸುಮ್ಮನೆ ತನಿಖೆ ನಡೆಸುವ ನಿಟ್ಟಿನಲ್ಲಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿಸೋಡಿಯಾ ವಿರುದ್ಧ ಸಿಬಿಐ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಯಾವುದೇ ಪುರಾವೆಗಳು ಸಿಕ್ಕಿರುವ ಕುರಿತು ಸಿಬಿಐ ಅಧಿಕಾರಿಗಳು ಎಲ್ಲೂ ಉಲ್ಲೇಖಿಸಿಲ್ಲ ಅಷ್ಟು ಮಾತ್ರವಲ್ಲದೆ ಅವರ ನಿವಾಸದ ಮೇಲೆ ದಾಳಿ ಮಾಡಿದಾಗಲೂ ಯಾವುದೇ ಪುರಾವೆಗಳು ಸಿಗಲಿಲ್ಲ ಎಂದು ಸಿಂಗ್ ಆರೋಪಿಸಿದ್ದಾರೆ.
Modi जी द्वारा उत्पीड़न इस क़दर बढ़ गया है-
जिस @msisodia के शिक्षा मॉडल की चर्चा दुनिया भर में होती है
मोदी जी की CBI कागज़ पर आरोप लिखकर ज़बरदस्ती Sign करवाने के लिए उनका मानसिक उत्पीड़न कर रही है
ये बात Manish जी और उनके वकील ने कोर्ट में कही है
– @SanjayAzadSln pic.twitter.com/jJkA8RTDHb
— AAP (@AamAadmiParty) March 5, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?