ರೊಹಿಂಗ್ಯಾಗಳಿಗೆ ಫ್ಲ್ಯಾಟ್:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ
Team Udayavani, Aug 18, 2022, 8:30 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೊಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡುವ ಬಗ್ಗೆ ನಿರ್ಧಾರ ಮಾಡಿದ್ದು ಯಾರು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಒತ್ತಾಯಿಸಿದ್ದಾರೆ.
ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, “ರೊಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡುವ ಬಗ್ಗೆ ಆಮ್ ಆದ್ಮಿ ಪಕ್ಷದ ಸರ್ಕಾರ ನಿರ್ಧಾರ ಮಾಡಿಲ್ಲ. ಕೇಂದ್ರ ಸರ್ಕಾರವೂ ನಿರ್ಧಾರ ಮಾಡಿಲ್ಲ ಎಂದಾದರೆ ಬೇರೆ ಯಾರು ನಿರ್ಧರಿಸಲು ಸಾಧ್ಯ? ಮಾಧ್ಯಮಗಳಲ್ಲಿ ನಿರಾಶ್ರಿತರಿಗೆ ವಾಸ್ತವ್ಯಕ್ಕೆ ಫ್ಲ್ಯಾಟ್ಗಳನ್ನು ನೀಡಲಾಗುತ್ತಿದೆ ಎಂಬ ವರದಿಯನ್ನು ನೋಡಿಯೇ ವಿಚಾರ ಗೊತ್ತಾಯಿತು’ ಎಂದು ಅವರು ಬರೆದಿದ್ದಾರೆ.
ವಿವರಗಳನ್ನು ಕೇಳಿದಾಗ ಕೇಂದ್ರ ಸರ್ಕಾರವೇ ಅದಕ್ಕೆ ಸಮ್ಮತಿ ಸೂಚಿಸಿ, ಮುಖ್ಯ ಕಾರ್ಯದರ್ಶಿ ಮೂಲಕ ಲೆಫ್ಟಿನೆಂಟ್ ಗವರ್ನರ್ಗೆ ಕಳುಹಿಸಲಾಗಿದೆ. ದೆಹಲಿಯ ಚುನಾಯಿತ ಸರ್ಕಾರಕ್ಕೆ ಮಾಹಿತಿ ನೀಡದೇ ಇದ್ದಿದ್ದೇಕೆ ಎಂದೂ ಆಕ್ಷೇಪಿಸಿದ್ದಾರೆ.
ಬಿಜೆಪಿ ತಿರುಗೇಟು:
ವಿವಾದದ ಬಗ್ಗೆ ತಿರುಗೇಟು ನೀಡಿರುವ ದೆಹಲಿ ಬಿಜೆಪಿ ಘಟಕದ ಆದೇಶ್ ಗುಪ್ತಾ, ಕೇಜ್ರಿವಾಲ್ ಸರ್ಕಾರವೇ ರೊಹಿಂಗ್ಯಾಗಳಿಗೆ ಆಶ್ರಯ ನೀಡುವ ಬಗ್ಗೆ ಪತ್ರ ಬರೆದಿತ್ತು ಎಂದು ದೂರಿದ್ದಾರೆ. ಕೇಜ್ರಿವಾಲ್ ಸರ್ಕಾರದ ಪಾಕಿಸ್ತಾನದಿಂದ ಆಗಮಿಸಿದ ಹಿಂದೂಗಳಿಗೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ನೀಡಲು ನಿರಾಕರಿಸಿತ್ತು. ಇದೀಗ ಅಕ್ರಮ ಪ್ರವೇಶಿಗಳಿಗೆ ನೆರವು ನೀಡಲು ಮುಂದಾಗಿದೆ ಎಂದಿದ್ದಾರೆ.
ತರೂರ್ ಟೀಕೆ:
ಈ ವಿಚಾರ ಸಂಬಂಧ ತಿರುವನಂತಪುರ ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ವಿಶ್ವಸಂಸ್ಥೆಯ ನಿರಾಶ್ರಿತರ ಆಯುಕ್ತರ ಕಾರ್ಯಕಾರಿ ಸಮಿತಿಯಲ್ಲಿ ಕೆಲಸ ಮಾಡಿದ ರಾಷ್ಟ್ರಕ್ಕೆ ಇಂಥ ಒಂದು ಬೆಳವಣಿಗೆ ಅವಮಾನ ಎಂದು ಹೇಳಿದ್ದಾರೆ. ದೇಶಕ್ಕೆ ಒಂದು ಹೆಮ್ಮೆಯ ಮಾನವೀಯತೆಯ ಇತಿಹಾಸ ಇದೆ. ಅದಕ್ಕೆ ಕೇಂದ್ರ ಸರ್ಕಾರ ಚ್ಯುತಿ ತರುವ ಕೆಲಸ ಮಾಡುವುದು ಬೇಡ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್