ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಮತ್ತೆರಡು ದಿನ ವಿಸ್ತರಣೆ
ಮಾ.10ಕ್ಕೆ ಜಾಮೀನು ಅರ್ಜಿ ವಿಚಾರಣೆ
Team Udayavani, Mar 4, 2023, 5:36 PM IST
ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಮತ್ತೆರಡು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದ್ದು. ಅಲ್ಲದೆ ಜಾಮೀನು ಕುರಿತ ಅರ್ಜಿ ವಿಚಾರಣೆಯನ್ನು ಮಾರ್ಚ್ 10 ರಂದು ನಡೆಸುವಂತೆ ಆದೇಶ ಹೊರಡಿಸಿದೆ.
ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು. ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೇಂದ್ರೀಯ ತನಿಖಾ ಸಂಸ್ಥೆ ನ್ಯಾಯಾಧೀಶರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಇನ್ನೆರೆಡು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿತು.
ಇದನ್ನೂ ಓದಿ: ʻಡೇರ್ ಡೆವಿಲ್ ಮುಸ್ತಫಾʼಗೆ ʻನಟ ರಾಕ್ಷಸʼ ಡಾಲಿ ಧನಂಜಯ್ ಸಪೋರ್ಟ್ : ಪ್ರೋಮೋ ವೈರಲ್