ಪಂಜಾಬ್: 420ಕ್ಕೂ ಹೆಚ್ಚು ವಿವಿಐಪಿಗಳಿಗೆ ಮತ್ತೆ ಭದ್ರತೆ
Team Udayavani, Jun 3, 2022, 7:35 AM IST
ಚಂಡೀಗಢ: ಪಂಜಾಬ್ ಸರಕಾರ ಇತ್ತೀಚೆಗೆ ತಾನು ಹಿಂಪಡೆದಿದ್ದ 420ಕ್ಕೂ ಹೆಚ್ಚು ಅತೀ ಗಣ್ಯ ವ್ಯಕ್ತಿಗಳ ಭದ್ರತೆಯನ್ನು ಪುನರ್ ನಿಯೋಜಿಸಲಾಗುತ್ತದೆ ಎಂದು ತಿಳಿಸಿದೆ.
ಗುರುವಾರದಂದು, ಸಿಎಂ ಭಗವಂತ್ ಮನ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ಈ ವಿಷಯ ತಿಳಿಸಿದ್ದಾರೆ. ಈ ಹಿಂದೆ ಸರಕಾರ ದಿಂದ ಭದ್ರತೆ ಪಡೆದಿದ್ದ ಎಲ್ಲ ಗಣ್ಯರಿಗೂ ಜೂ. 7ರಿಂದ ಪುನಃ ಅದೇ ರೀತಿಯ ಭದ್ರತೆಯನ್ನು ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದರಿಂದ, ಪಂಜಾಬ್ನಲ್ಲಿ ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕುವುದಾಗಿ ಹೊರಟಿದ್ದ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ (ಆಪ್) ತೀವ್ರ ಮುಜುಗರಕ್ಕೆ ಈಡಾಗಿದೆ.
ಇತ್ತೀಚೆಗೆ, 424 ವಿವಿಐಪಿಗಳ ಭದ್ರತೆ ಯನ್ನು ಸರಕಾರ ಹಿಂಪಡೆದ ಬೆನ್ನಲ್ಲೇ ಖ್ಯಾತ ಗಾಯಕ ಸಿಧು ಮೂಸೆವಾಲ ಅವರ ಹತ್ಯೆಯಾಗಿತ್ತು. ಆ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಭದ್ರತೆಯನ್ನು ಹಿಂಪಡೆದಿದ್ದಕ್ಕೆ ಕಾರಣ ನೀಡಬೇಕು ಹಾಗೂ ಭದ್ರತೆ ಹಿಂಪಡೆದವರ ಹೆಸರುಗಳನ್ನು ಪ್ರಕಟಿಸಿ ದ್ದೇಕೆ ಎಂದು ಪ್ರಶ್ನಿಸಿತ್ತು. ಇದರಿಂದ ಸರಕಾರ ಪೇಚಿಗೆ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾ ಲಯಕ್ಕೆ ವಿವರಣೆ ಕೊಟ್ಟಿರುವ ಸಿಎಂ, ವಿವಿಐಪಿಗಳಿಗೆ ಪುನಃ ಭದ್ರತೆಯನ್ನು ನೀಡುವುದಾಗಿ ತಿಳಿಸಿದೆ.
ಕೇಂದ್ರಕ್ಕೆ ಪತ್ರ: ಗಾಯಕ ಮೂಸೆವಾಲ ಕುಟುಂಬವು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದು, ಮೂಸೆವಾಲ ಹತ್ಯೆ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಈ ವಿಷಯವನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ.
ಮಾನ್ – ಕೇಜ್ರಿವಾಲ್ ಭೇಟಿ: ಮೂಸೆವಾಲ ಹತ್ಯೆ ಪ್ರಕರಣದಿಂದಾಗಿ ವಿಪಕ್ಷಗಳಿಂದ ಭಾರೀ ಟೀಕೆಗೆ ಒಳಗಾಗಿರುವ ಪಂಜಾಬ್ ಮುಖ್ಯ ಮಂತ್ರಿ ಭಗವಂತ ಮಾನ್, ಗುರುವಾರ, ಹೊಸದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ