ಜೂನ್ 25 ಕರಾಳ ದಿನ ,ಭಾರತೀಯರು ಅದನ್ನು ಮರೆಯಲು ಸಾಧ್ಯವಿಲ್ಲ: ಮೋದಿ
Team Udayavani, Jun 25, 2017, 4:10 PM IST
ಹೊಸದಿಲ್ಲಿ: ಜೂನ್ 25 ಭಾರತೀಯರ ಪಾಲಿಗೆ ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಉಳ್ಳವರು ಅದನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು 42 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿಯನ್ನು ನೆನೆಪಿಸಿದ್ದಾರೆ.
ಅಮೆರಿಕ ಪ್ರವಾಸದಲ್ಲಿದ್ದರೂ ಜನಪ್ರಿಯ ರೆಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ದೇಶವಾಸಿಗಳನ್ನುದ್ದೇಶಿಸಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.
1975 ರ ಜೂನ್ 25 ರಂದು ಹೇರಲಾದ ತುರ್ತು ಪರಿಸ್ಥಿತಿಯನ್ನು ದೇಶಭಕ್ತ ಭಾರತೀಯರು ಯಾರೂ ಮರೆಯಲು ಸಾಧ್ಯವಿಲ್ಲ. ಇಡೀ ರಾಷ್ಟ್ರವನ್ನು ಸೆರೆಮನೆಯಲ್ಲಿಟ್ಟಂತಾಗಿತ್ತು.ಆ ವೇಳೆ ಮಾಧ್ಯಮಗಳು ನಿಷ್ಪರಿಣಾಮಕಾರಿಯಾಗಿದ್ದವು. ಆ ದಿನಗಳಲ್ಲಿ ಹೋರಾಟದ ಮೂಲಕ ದೇಶದ ಪ್ರತೀಯೊಬ್ಬ ನಾಯಕರು ರಾಷ್ಟ್ರೀಯತೆಯನ್ನು ಸಾಬೀತು ಮಾಡಿದ್ದರು ಎಂದರು.
ಗುಜರಾತ್ ನಲ್ಲಿ ನಾನು ಹೂಗುಚ್ಛದ ಬದಲಾಗಿ ಪುಸ್ತಕಗಳು ಮತ್ತು ಕರವಸ್ತ್ರಗಳನ್ನು ನೀಡುವ ಮೂಲಕ ಹೊಸ ಸಂಪ್ರದಾಯವನ್ನು ಸೃಷ್ಟಿ ಮಾಡಿದ್ದೆ. ಜನರು ಹೂಗುಚ್ಛಗಳ ಬದಲಾಗಿ ಪುಸ್ತಕಗಳನ್ನು ನೀಡುವ ಸಂಪ್ರದಾಯವನ್ನು ಅಳವಡಿಸಿಕೊಳ್ಳಲು ಮತ್ತು ಖಾದಿ ಬಳಸಲು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!