87ನೇ ಮನ್ ಕಿ ಬಾತ್ : ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚು ಪ್ರಚಾರ ಕೊಡಿ: ಪ್ರಧಾನಿ ಮನವಿ
ವಿದೇಶಗಳಲ್ಲೂ ಈಗ ಸಿಗುತ್ತಿದೆ ವಿಜಯಪುರದ ತರಕಾರಿ, ಹಣ್ಣುಗಳು
Team Udayavani, Mar 28, 2022, 7:30 AM IST
ನವದೆಹಲಿ: ದೇಶದ ವಸ್ತುಗಳಿಗೆ ಜಗತ್ತಿನ ಇತರ ಭಾಗಗಳಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ರಫ್ತು ಪ್ರಮಾಣವು 400 ಶತಕೋಟಿ ಡಾಲರ್ (30 ಲಕ್ಷ ಕೋಟಿ ರೂ.)ನ ಗುರಿ ಸಾಧಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
87ನೇ ಆವೃತ್ತಿಯ “ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ದೇಶದ ಪ್ರತಿ ನಾಗರಿಕನೂ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಇಂಥ ಕ್ರಮದ ಮೂಲಕ ಅವುಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಂತೆ ಮಾಡಬೇಕು ಎಂದು ಹೇಳಿದ್ದಾರೆ.
ರೈತರು, ನೇಕಾರರು, ಎಂಜಿನಿಯರ್ಗಳು, ಸಣ್ಣ ಉದ್ದಿಮೆದಾರರು, ಸಣ್ಣ ಮತ್ತು ಮಧ್ಯಮ ಕ್ಷೇತ್ರದ ಉದ್ದಿಮೆಗಳಲ್ಲಿಯೇ ದೇಶದ ಶಕ್ತಿ ಅಡಕವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಅವರೆಲ್ಲರ ಶ್ರಮದಿಂದಲೇ ರಫ್ತು ಗುರಿ ಸಾಧಿಸಲು ಸಾಧ್ಯವಾಯಿತು. ಇದರಿಂದಾಗಿ ನಮ್ಮ ದೇಶದಲ್ಲಿ ಸಿದ್ಧಗೊಂಡ ವಸ್ತುಗಳಿಗೆ ಜಗತ್ತಿನ ಇತರ ಭಾಗಗಳಲ್ಲಿ ಹೆಚ್ಚು ಬೇಡಿಕೆ ಪಡೆಯುತ್ತಿವೆ ಎಂಬುದು ಸಾಬೀತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ನಾಯಕರ ಷಡ್ಯಂತ್ರದಿಂದ ಸಚಿವ ಸ್ಥಾನ ತಪ್ಪಿತು: ವಿಶ್ವನಾಥ್
ದೇಶದಲ್ಲಿ ವಸ್ತುಗಳ ಪೂರೈಕೆ ಸರಣಿ ಬಲಿಷ್ಠವಾಗಿದೆ. ಅಸ್ಸಾಂನ ಹೈಲಾಕಂಡಿಯ ಚರ್ಮದ ಉತ್ಪನ್ನಗಳು, ಉಸ್ಮಾನಾಬಾದ್ನ ಕೈಮಗ್ಗದ ಉತ್ಪನ್ನಗಳು, ಕರ್ನಾಟಕದ ವಿಜಯಪುರದಲ್ಲಿ ಬೆಳೆಯುವ ತರಕಾರಿ ಮತ್ತು ಹಣ್ಣುಗಳಿಗೆ ಜಗತ್ತಿನ ವಿವಿಧ ಭಾಗಗಳಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ವಿದೇಶಗಳ ಮಾರುಕಟ್ಟೆಗಳಲ್ಲೂ ಇವುಗಳು ಲಭಿಸಲು ಆರಂಭಿಸಿವೆ ಎಂದೂ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…