ಹರ್ಯಾಣದಲ್ಲಿಂದು ಖಟ್ಟರ್ ಪಟ್ಟಾಭಿಷೇಕ; ಡಿಸಿಎಂ ಹುದ್ದೆಗೆ ಚೌಟಾಲ
Team Udayavani, Oct 27, 2019, 8:22 AM IST
ಚಂಡೀಗಢ: ಹರ್ಯಾಣದಲ್ಲಿ ಇಂದು ಮನೋಹರಲಾಲ್ ಖಟ್ಟರ್ ಮತ್ತೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾನ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ದುಷ್ಯಂತ್ ಚೌಟಾಲಾ ಅಧಿಕಾರ ಸ್ವೀಕರಿಸಲಿದ್ದಾರೆ.
ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಪ್ರಮಾಣ ವಚನ ಭೋಧಿಸಲಿದ್ದಾರೆ.
ಬಿಜೆಪಿ- ಜೆಜೆಪಿ ಮೈತ್ರಿಯಲ್ಲಿ ಇದೇ ಮೊದಲ ಬಾರಿಗೆ ಹರ್ಯಾಣದಲ್ಲಿ ಸರಕಾರ ರಚನೆಯಾಗುತ್ತಿದೆ.
ಮನೋಹರ ಲಾಲ್ ಖಟ್ಟರ್ ಸತತ ಎರಡನೇ ಬಾರಿಗೆ ಹರ್ಯಾಣದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಮೊದಲ ಅವಧಿಯಲ್ಲಿ ಪೂರ್ಣ ಬಹುಮತದೊಂದಿಗೆ ಮುಖ್ಯಮಂತ್ರಿಯಾಗಿದ್ದರೆ, ಈ ಬಾರಿ ಮೈತ್ರಿ ಸರಕಾರದ ನೇತೃತ್ವ ವಹಿಸಲಿದ್ದಾರೆ.
ದುಷ್ಯಂತ್ ಚೌಟಾಲ ಕಳೆದ ವರ್ಷವಷ್ಟೇ ಜೆಜೆಪಿ ಪಕ್ಷ ಕಟ್ಟಿ ಈ ವಿಧಾನಸಭಾ ಚುನಾವಣೆಯಲ್ಲಿ 10 ಸ್ಥಾನಗಳನ್ನು ಗೆದ್ದು ಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!