ಜನನಾಯಕ ಪಾರೀಕರ್‌ಗೆ ವಿದಾಯ


Team Udayavani, Mar 20, 2019, 12:30 AM IST

w-25.jpg

ಪಣಜಿ: ಅಪ್ರತಿಮ ದೇಶಭಕ್ತ, ಸರಳ- ಸಜ್ಜನ ರಾಜಕಾರಣಿ ಮನೋಹರ್‌ ಪಾರೀಕರ್‌ ಅವರಿಗೆ ಸೋಮವಾರ ಸಂಜೆ ಸಕಲ ಸರಕಾರಿ ಹಾಗೂ ಸೇನಾ ಮರ್ಯಾ ದೆಗಳೊಂದಿಗೆ ಹೃದಯಸ್ಪರ್ಶಿ ಅಂತಿಮ ವಿದಾಯ ನೀಡಲಾಯಿತು. ಮಿರಾಮರ್‌ ಬೀಚ್‌ನಲ್ಲಿ ನಡೆದ ಅಂತ್ಯಕ್ರಿಯೆ ಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ ಹಾಗೂ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿ ಗಳು ಭಾಗವಹಿಸಿದ್ದರು. ಚಿತೆಗೆ ಪಾರೀಕರ್‌ ಅವರ ಹಿರಿಯ ಪುತ್ರ ಉತ್ಪಲ್‌ ಪಾರೀಕರ್‌ ಅಗ್ನಿಸ್ಪರ್ಶ ಮಾಡಿದರು. ಗೋವಾದ ಮೊದಲ ಮುಖ್ಯಮಂತ್ರಿ ದಯಾನಂದ್‌ ಬಂಡೋಡ್ಕರ್‌ ಅವರ ಸಮಾಧಿ ಪಕ್ಕದಲ್ಲೇ ಪಾರೀಕರ್‌ ಅಂತ್ಯಸಂಸ್ಕಾರವನ್ನೂ ನಡೆಸಲಾಯಿತು. 

ಪ್ರಧಾನಿ ಮೋದಿ ನಮನ: ಕಲಾ ಅಕಾಡೆಮಿ ಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಸ್ಮತಿ ಇರಾನಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವಾರು ಗಣ್ಯರು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಆನಂತರ, ನರೇಂದ್ರ ಮೋದಿಯವರು ಪಾರೀಕರ್‌ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

2 ಕಡೆ ಅಂತಿಮ ದರ್ಶನ: ಸೋಮವಾರ ಬೆಳಗ್ಗೆ, ದೋನಾ ಪೌಲಾದಲ್ಲಿರುವ ಪಾರೀಕರ್‌  ಖಾಸಗಿ ನಿವಾಸದಿಂದ ಪಣಜಿ ಯವರೆಗಿನ ಸುಮಾರು 5 ಕಿ.ಮೀ. ದೂರ ದಲ್ಲಿರುವ ಪಣಜಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿವರೆಗೆ ಟ್ರಕ್‌ನಲ್ಲಿ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾ ಯಿತು. ಪಣಜಿಯ ಕೇಂದ್ರ ಭಾಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸೇರಿದಂತೆ ಹಲವಾರು ಗಣ್ಯರು, ಕಾರ್ಯ ಕರ್ತರು ಪಾರೀಕರ್‌ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಲವಾರು ಜನ ದುಃಖತಪ್ತರಾದರು. ಅನಂತರ, ಪಾರ್ಥಿವ ಶರೀರವನ್ನು ಕಲಾ ಅಕಾಡೆಮಿಗೆ ಸ್ಥಳಾಂತರಿಸಿ ಅಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. 

ಜನಪ್ರಿಯತೆಯ ಅನಾವರಣ: ಕಲಾ ಅಕಾಡೆಮಿಯಿಂದ ಮಿರಾಮರ್‌ ಬೀಚ್‌ವರೆಗೆ ಸಂಜೆ 4 ಗಂಟೆಗೆ ನಡೆದ ಅಂತಿಮ ಯಾತ್ರೆಯ ವೇಳೆ, ದಾರಿಯ ಇಕ್ಕೆಲಗಳಲ್ಲೂ ಜನರು ಮರ, ಕಟ್ಟಡಗಳನ್ನು ಏರಿ ಅವರ ಅಂತಿಮ ದರ್ಶನ ಪಡೆದರು. ಎಲ್ಲೆಲ್ಲೂ ಶೋಕ: ಪಾರೀಕರ್‌ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಒಂದು ದಿನ ಹಾಗೂ ಗೋವಾ ಸರಕಾರಏಳು ದಿನಗಳ ಶೋಕಾಚರಣೆ ಘೋಷಿಸಿದ ಹಿನ್ನೆಲೆಯಲ್ಲಿ ಗೋವಾದ್ಯಂತ ಸೋಮವಾರ ಎಲ್ಲಾ ಸರಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿತ್ತು. 

ಬಾಂಬೆ ಐಐಟಿ ಶ್ರದ್ಧಾಂಜಲಿ
ಪಾರೀಕರ್‌ ಗೌರವಾರ್ಥ, ಬಾಂಬೆ ಐಐಟಿಯ ಆವರಣದಲ್ಲಿರುವ ಪಿ.ಸಿ. ಸಕ್ಸೇನಾ ಆಡಿಟೋರಿಯಂನಲ್ಲಿ ಸೋಮವಾರ ಸಂಜೆ 5 ಗಂಟೆಗೆ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಬಾಂಬೆ ಐಐಟಿಯಲ್ಲಿ ಲೋಹಶಾಸ್ತ್ರ ವಿಷಯದಲ್ಲಿ ಇಂಜಿನಿಯರಿಂಗ್‌ ಮುಗಿಸಿದ್ದ ಪಾರೀಕರ್‌, ಆನಂತರ ರಾಜಕೀಯಕ್ಕೆ ಕಾಲಿಟ್ಟಿದ್ದರು. ಸ್ವತಂತ್ರ ಭಾರತ ರಾಜ್ಯವೊಂದರ ಮುಖ್ಯಮಂತ್ರಿಯಾದ ಮೊದಲ ಐಐಟಿ ವಿದ್ಯಾರ್ಥಿ ಎಂಬ ಹೆಗ್ಗಳಿಕೆಯೂ ಅವರದ್ದಾಗಿದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.