ಮೋಪಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರು: ಸಿ.ಟಿ. ರವಿ
Team Udayavani, Dec 20, 2022, 5:30 PM IST
ಪಣಜಿ: ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮನೋಹರ್ ಪಕ್ಕದಲ್ಲಿ ಪರಿಕ್ಕರ್ ಹಾಗೂ ಅವರ ಫೋಟೋ ಅಳವಡಿಸಲಾಗುವುದು ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ. ಟಿ. ರವಿ ಹೇಳಿದ್ದಾರೆ. ಗೋವಾದ ಮೋಪಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ರವರ ಹೆಸರಿಡಲಾಗಿದೆ. ಇದೇ ವಿಷಯವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದೀಗ ಮನೋಹರ್ ಪಕ್ಕದಲ್ಲಿ ಪರಿಕ್ಕರ್ ಸೇರ್ಪಡೆಯಾಗಲಿದ್ದು, ವಿಮಾನ ನಿಲ್ದಾಣದಲ್ಲಿ ಪರಿಕ್ಕರ್ ಫೋಟೋ ಕೂಡ ಹಾಕಲಾಗುತ್ತದೆ ಎಂದು ಸಿ.ಟಿ. ರವಿ ಹೇಳಿದರು.
ಪಣಜಿಯಲ್ಲಿ ಗೋವಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಈ ಸಭೆಯ ನಂತರ ಸಿ.ಟಿ ರವಿ ಸುದ್ಧಿಗಾರರೊಂದಿಗೆ ಮಾತನಾಡಿದರು. ಮೋಪಾ ವಿಮಾನ ನಿಲ್ದಾಣದ ಹೆಸರನ್ನು “ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಸರ್ಕಾರ ಘೋಷಿಸಿದ ತಕ್ಷಣ, ಮರುನಾಮಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್ ಗಳು ವೈರಲ್ ಆಗಿವೆ. ಬಿಜೆಪಿ ವಕ್ತಾರ ಸಾವಿಯೋ ರೋಡ್ರಿಗಸ್ ಕೂಡ ಮೊಪಾದಲ್ಲಿರುವ ವಿಮಾನ ನಿಲ್ದಾಣಕ್ಕೆ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರನ್ನು ಮನೋಹರ್ ಪರಿಕ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾಯಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮನೋಹರ್ ಪಕ್ಕದಲ್ಲಿ ಪರಿಕ್ಕರ್ ಕೂಡ ಸೇರ್ಪಡೆಯಾಗಲಿದ್ದು, ವಿಮಾನ ನಿಲ್ದಾಣದಲ್ಲಿ ಪರಿಕ್ಕರ್ ಫೋಟೋ ಕೂಡ ರಾರಾಜಿಸಲಿದೆ ಎಂದು ಸಿ. ಟಿ. ರವಿ ಹೇಳಿದರು.
ಗೋವಾದ ಮೋಪಾ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ, ಡಿಸೆಂಬರ್ 11 ರಂದು ಉದ್ಘಾಟಿಸಿದರು.
ಗೋವಾದ ಆರ್ಥಿಕತೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮೋಪಾ ವಿಮಾನ ನಿಲ್ದಾಣವು ಕೆಲಸ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದರು. ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದ ಹೆಸರನ್ನು “ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಔಪಚಾರಿಕವಾಗಿ ಘೋಷಿಸಿದರು. ಇದರಿಂದ ಬಹುದಿನಗಳಿಂದ ನಡೆಯುತ್ತಿದ್ದ ನಾಮಕರಣ ವಿವಾದಕ್ಕೆ ತೆರೆ ಬಿದ್ದಿದೆ. ಇದೀಗ ಈ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಎಂದು ಪೂರ್ತಿ ಹೆಸರಿಡಲು ನಿರ್ಣಯ ತೆಗೆದುಕೊಳ್ಳಲಾಗಿರುವುದಾಗಿ ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ ರವಿ ಹೇಳಿದ್ದಾರೆ.
ಇದನ್ನೂ ಓದಿ: ಎಂಬಪ್ಪೆ ಜರ್ಸಿ ತೊಟ್ಟ ವಧು, ಮೆಸ್ಸಿ ಜರ್ಸಿ ತೊಟ್ಟ ವರ: ಕೇರಳದಲ್ಲೊಂದು ಫುಟ್ಬಾಲ್ ಅಭಿಮಾನಿಗಳ ಮದುವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ