ದುಃಸ್ಸಾಹಸ ಕೈಗೊಂಡರೆ ತಕ್ಕ ಶಾಸ್ತಿ: ಪಾಕ್ಗೆ ಭೂಸೇನೆಯ ಹೊಸ ಮುಖ್ಯಸ್ಥ ಎಚ್ಚರಿಕೆ
Team Udayavani, Dec 31, 2019, 10:26 PM IST
ನವದೆಹಲಿ: ಪಾಕಿಸ್ತಾನ ಪದೇ ಪದೆ ಜಮ್ಮು ಮತ್ತು ಕಾಶ್ಮೀರದಲ್ಲಿ ದುಃಸ್ಸಾಹಸ ಕೈಗೊಂಡರೆ ಅದಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಗುತ್ತದೆ ಎಂದು ಭೂಸೇನೆಯ ನೂತನ ಮುಖ್ಯಸ್ಥ ಜ.ಮನೋಜ್ ಮುಕುಂದ್ ನರವಾನೆ ಎಚ್ಚರಿಕೆ ನೀಡಿದ್ದಾರೆ.
ಭೂಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬಳಿಕ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನೆರೆಯ ರಾಷ್ಟ್ರ ನಡೆಸುವ ಕುಕೃತ್ಯಗಳಿಗೆ ತಕ್ಕ ಶಾಸ್ತಿ ಮಾಡುವ ಅಧಿಕಾರ ಭಾರತಕ್ಕೆ ಇದೆ ಎಂದು ಹೇಳಿದ್ದಾರೆ. ಚೀನಾದ ಜತೆಗೆ ಹೊಂದಿಕೊಂಡಿರುವ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಭದ್ರತೆಯ ಬಗ್ಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
“ದೇಶದ ಉತ್ತರ ಮತ್ತು ಪಶ್ಚಿಮ ಭಾಗದಿಂದ ದೇಶಕ್ಕೆ ಭೀತಿಯ ವಾತಾವರಣ ಮುಂದುವರಿದಿದೆ. ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಭಾಗದಿಂದ ಬರುತ್ತಿರುವ ಬೆದರಿಕೆಗಳನ್ನು ನಿಯಂತ್ರಿಸುವುದರ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದೇವೆ. ಕಣಿವೆ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಕಳುಹಿಸಿಕೊಡುತ್ತಿರುವ ಉಗ್ರರನ್ನು ನಿರ್ದಯೆಯಿಂದ ನಿಗ್ರಹಿಸಲಾಗುತ್ತಿದೆ. ಈ ಬೆಳವಣಿಗೆ ಪಾಕಿಸ್ತಾನಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್