ಮೋದಿ ಗಂಟಲು ಸೀಳಲು ಬಿಹಾರದ ಜನ ತಯಾರಾಗಿದ್ದಾರೆ!: ರಾಬ್ರಿದೇವಿ
Team Udayavani, Nov 22, 2017, 2:14 PM IST
ಪಾಟ್ನಾ:ಬಿಹಾರದ ಹಲವು ಜನರು ಪ್ರಧಾನಿ ನರೇಂದ್ರ ಮೋದಿ ಅವರ ಗಂಟಲು ಸೀಳಲು ಹಾಗೂ ಕೈ ಕಡಿಯಲು ತಯಾರಾಗಿದ್ದಾರೆ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ.
ನರೇಂದ್ರ ಮೋದಿ ದೂಷಿಸುತ್ತಿರುವ ಕೈ ಬೆರಳುಗಳನ್ನು ಕತ್ತರಿಸಬೇಕಾಗಿದೆ. ಈ ದೇಶದಲ್ಲಿ ಆ ವ್ಯಕ್ತಿಯನ್ನು ಯಾರೂ ತಡೆಯುತ್ತಿಲ್ಲ. ಬಿಹಾರದ ಜನರು ಏನು ಹೇಳುವುದಿಲ್ಲ. ಆದರೆ ಬಿಹಾರದ ಹಲವು ಜನರು ಪ್ರಧಾನಿ ಮೋದಿ ಅವರ ಗಂಟಲು ಸೀಳಲು ತಯಾರಾಗಿದ್ದಾರೆ ಎಂದು ಹೇಳಿದರು.
ಮಂಗಳವಾರ ಬಿಹಾರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ರಾಬ್ರಿದೇವಿ ಈ ಹೇಳಿಕೆ ನೀಡಿದ್ದಾರೆ. ಬಿಹಾರದ ಬಿಜೆಪಿ ಅಧ್ಯಕ್ಷ, ಸಂಸದ ನಿತ್ಯಾನಂದ ರಾಯ್ ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರ ವಿರುದ್ಧ ಎತ್ತುವ ಎಲ್ಲಾ ಕೈ ಬೆರಳುಗಳನ್ನು ಹಾಗೂ ಕೈಗಳನ್ನು ಮುರಿಯಬೇಕು(ಕತ್ತರಿಸಬೇಕು) ಎಂದು ಹೇಳಿಕೆ ನೀಡಿದ್ದರು.
ಆದರೆ ಬಳಿಕ ರಾಯ್ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದರು. ಬಿಹಾರ ಜನರ ಭಾವನೆಗಳಿಗೆ ಧಕ್ಕೆ ತಂದ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವುದಾಗಿ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಿತ್ಯಾನಂದ ರಾಯ್ ಅವರ ಹೇಳಿಕೆಗೆ ತಿರುಗೇಟು ಎಂಬಂತೆ ರಾಬ್ರಿದೇವಿ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!