West Bengal ಹಲವು ಭಾಗಗಳು ಗೂಂಡಾಗಳ ಹಿಡಿತದಲ್ಲಿದೆ: ಗವರ್ನರ್
Team Udayavani, Apr 8, 2024, 12:54 AM IST
ಕೋಲ್ಕತಾ: ಇಡೀ ಪಶ್ಚಿಮ ಬಂಗಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿಲ್ಲ. ಆದರೆ ಗಣನೀಯ ಪ್ರದೇಶ ಗೂಂಡಾಗಳ ಹಿಡಿತದಲ್ಲಿದೆ ಎಂದು ರಾಜ್ಯಪಾಲ ಸಿ.ವಿ.ಆನಂದ ಬೋಸ್ ಹೇಳಿದ್ದಾರೆ. ಜತೆಗೆ, ರಾಜ್ಯದಲ್ಲಿನ ಹಿಂಸಾಚಾರಕ್ಕೆ ಸಂಪೂರ್ಣವಾಗಿ ಟಿಎಂಸಿ ಸರಕಾರವನ್ನೇ ದೂಷಿ ಸುವುದು ತಪ್ಪು. ಇದಕ್ಕೆ ಹಿಂದಿನ ಪರಂಪರೆಯೂ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾನು ನೋಡಿದಂತೆ ಸಂದೇಶ್ಖಾಲಿಯಲ್ಲಿ ಮಹಿಳೆಯರು ಶಾಂತಿಯ ಜತೆಗೆ ಗೌರವ ಬಯಸುತ್ತಿದ್ದಾರೆ. ಆದರೆ ಅವರ ಗೌರವ ಛಿದ್ರವಾಗಿದೆ. ಗಣನೀಯ ಪ್ರದೇಶ ಗೂಂಡಾಗಳ ಹಿಡಿತ ದಲ್ಲಿದೆ. ಕೆಲವು ಕಡೆ ಗೂಂಡಾ ರಾಜ್ಯ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎನ್ಐಎ ಅಧಿಕಾರಿಗಳ ವಿರುದ್ಧವೇ ಎಫ್ಐಆರ್
ಪಶ್ಚಿಮ ಬಂಗಾಲದಲ್ಲಿ ಎನ್ಎಐ ಅಧಿ ಕಾರಿಗಳ ಮೇಲೆ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಿಸಲಾಗಿದೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಎಂಸಿ ನಾಯಕ ಮನೋಬ್ರತ ಜನಾ ಎಂಬವರ ಪತ್ನಿ, ಎನ್ಐಎ ಅಧಿಕಾರಿಗಳೇ ತಮ್ಮ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ತನಿಖೆ ನಡೆಸುವ ನೆಪದಲ್ಲಿ ಎನ್ಐಎ ಅಧಿಕಾರಿಗಳು ಬಲ ವಂತವಾಗಿ ಮನೆಗೆ ನುಗ್ಗಿದ್ದಾರೆ. ಜತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರು ಎನ್ಐಎ, ದಾಳಿಗೆ ಸಂಬಂಧಿ ಸಿದಂತೆ ನಾವು ಯಾವುದೇ ಪ್ರಚೋದನೆಯನ್ನು ನೀಡಿಲ್ಲ. ಕಾನೂನು ಪ್ರಕ್ರಿಯೆಯನ್ನು ತಡೆಯಲು ಜನರೇ ದಾಳಿ ನಡೆಸಿದ್ದಾರೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ