ಮಾವೋವಾದ, ಮತಾಂತರ ಅಪಾಯಕಾರಿ: ಬಿಜೆಪಿ ಕೈಪಿಡಿಯಲ್ಲಿ ಉಲ್ಲೇಖ
Team Udayavani, Sep 3, 2018, 12:39 PM IST
ಪುಣೆ/ರಾಯು³ರ: “ಪಾಕಿಸ್ತಾನ, ಚೀನಾ ದಿಂದ ದೇಶದಲ್ಲಿರುವ ಮಾವೋವಾದಿಗ ಳಿಗೆ ನಿರಂತರ ಬೆಂಬಲ ಸಿಗುತ್ತಿದೆ. ಬಲ ವಂತದ ಮತಾಂತರ ದೇಶಕ್ಕೆ ಅಪಾಯ ಕಾರಿ.’ ಹೀಗೆಂದು ಬಿಜೆಪಿಯ ಹೊಸ ಪದಾಧಿಕಾರಿಗಳು, ಕಾರ್ಯಕರ್ತರಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಸಿದ್ಧ ಪಡಿಸ ಲಾಗಿರುವ ಕೈಪಿಡಿಯಲ್ಲಿ ಉಲ್ಲೇಖೀಸಲಾಗಿದೆ.
“ಮಾವೋವಾದಿಗಳನ್ನು ನಕ್ಸಲೀಯರು ಎಂದು ಕರೆಯಲಾಗುತ್ತದೆ. ಈಶಾನ್ಯ ರಾಜ್ಯಗಳಲ್ಲಿರುವ ಭಯೋತ್ಪಾದಕ ಗುಂಪು ಗಳ ಜತೆ ಸೇರಿ ಅವರು ಜಂಟಿ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ’ ಎಂದು ಬರೆಯಲಾಗಿದೆ. ಇದಲ್ಲದೆ ಬಲ ವಂತದ ಮತಾಂತರ ಕೂಡ ಕೆಲವೊಂದು ರಾಜ್ಯಗಳಲ್ಲಿ ಒಟ್ಟೂ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಅದಕ್ಕಾಗಿ ಹಣದ ಆಮಿಷ, ಗೂಂಡಾಗಳನ್ನು ಬಳಕೆ ಮಾಡಲಾಗುತ್ತದೆ ಎಂದು ಕೈಪಿಡಿಯಲ್ಲಿ ಉಲ್ಲೇಖೀಸಲಾಗಿದೆ.
ಹೆಚ್ಚುವರಿ 90 ದಿನ: ಭೀಮಾ-ಕೋರೆ ಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿ ಜೂನ್ನಲ್ಲಿ ಬಂಧಿತರಾಗಿರುವ ಐವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಗೆ ಪುಣೆ ಪೊಲೀಸರಿಗೆ 90 ದಿನಗಳ ಕಾಲಾವಕಾಶ ಸಿಕ್ಕಿದೆ. ಹಾಲಿ ಬಂಧಿತರಾಗಿರುವವರ ನ್ಯಾಯಾಂಗ ಬಂಧನ ಅವಧಿ ಸೆ.3ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಶನಿ ವಾರವೇ ಪೊಲೀಸರು ಅಕ್ರಮ ಚಟು ವಟಿಕೆಗಳ ನಿಷೇಧ ಕಾಯ್ದೆ (ಯುಎಪಿಎ) ಕೋರ್ಟ್ಗೆ ಮತ್ತೆ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದರು. “ತನಿಖೆ ಇನ್ನೂ ಪ್ರಗತಿಯಲ್ಲಿ ಇರುವುದರಿಂದ ಇನ್ನೂ 90 ದಿನಗಳ ಕಾಲಾವಕಾಶಬೇಕು ಎಂದು ಕೇಳಿ ಕೊಂಡಿದ್ದೆವು. ಕೋರ್ಟ್ ಅದನ್ನು ಪುರಸ್ಕರಿ ಸಿದೆ’ ಎಂದು ಪುಣೆ ಪೊಲೀಸ್ ಆಯುಕ್ತ ಶಿವಾಜಿ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. ಆ.28ರಂದು ಪಿ.ವರವರ ರಾವ್, ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾ, ಸುಧಾ ಭಾರದ್ವಾಜ್ರನ್ನು ಬಂಧಿಸಲಾಗಿತ್ತು.
ನಾಲ್ವರು ನಕ್ಸಲರ ಹತ್ಯೆ
ಛತ್ತೀಸ್ಗಡದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರನ್ನು ಭದ್ರತಾಪಡೆಗಳು ಹತ್ಯೆಗೈದಿವೆ. ಮೃತ ನಕ್ಸಲರ ಪೈಕಿ ಒಬ್ಬ ಮಹಿಳೆಯೂ ಸೇರಿ ದ್ದಾರೆ ಎಂದು ನಾರಾಯಣಪುರ ಎಸ್ಪಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ. ಗುಮಿ ಯಬೇಡಾ ಗ್ರಾಮದ ಅರಣ್ಯ ದಲ್ಲಿ ಎನ್ಕೌಂಟರ್ ನಡೆದಿದ್ದು, ಗುಂಡಿನ ಚಕಮಕಿ ಬಳಿಕ ನಾಲ್ವರು ಮೃತಪಟ್ಟರೆ, ಉಳಿದ ನಕ್ಸಲರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಘಟನಾ ಸ್ಥಳದಿಂದ ಹಲವು ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಶುಕ್ಲಾ ಮಾಹಿತಿ ನೀಡಿದ್ದಾರೆ.
ಮೃತದೇಹ ಪತ್ತೆ
ಏತನ್ಮಧ್ಯೆ, ಛತ್ತೀಸ್ಗಡದಿಂದ ಆ.26ರಂದು ನಕ್ಸಲರಿಂದ ಅಪಹರಣಕ್ಕೀಡಾಗಿದ್ದ ಇಬ್ಬರು ವ್ಯಕ್ತಿಗಳ ಮೃತದೇಹ ಭಾನುವಾರ ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಛತ್ತೀಸ್ಗಡದ ಬಂಡೆ ಗ್ರಾಮದಿಂದ ಸೋನಾ ಪಧಾ ಮತ್ತು ಸೋಮ್ಜೀ ಪಧಾ ಎಂಬವರನ್ನು ನಕ್ಸಲರು ಅಪಹರಿಸಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಆದರೆ, ಅಪಹರಣವಾದ 300 ಕಿ.ಮೀ. ದೂರದಲ್ಲಿ ರಸ್ತೆಯೊಂದರ ಪಕ್ಕ ಮೃತದೇಹ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ