ಚತ್ತೀಸ್ ಗಢ:ಸಿದ್ಧಾಂತದಲ್ಲಿ ಭಿನ್ನಾಭಿಪ್ರಾಯ- ಸಹಚರರಿಂದಲೇ ನಕ್ಸಲ್ ಮುಖಂಡನ ಹತ್ಯೆ
ಚತ್ತೀಸ್ ಗಢದ ಬಸ್ತಾರ್ ರೇಂಜ್ ನ ಇನ್ಸ್ ಪೆಕ್ಟರ್ ಜನರಲ್ ಪೊಲೀಸ್ ಪಿ.ಸುಂದರ್ರಾಜ್ ತಿಳಿಸಿದ್ದಾರೆ.
Team Udayavani, Oct 3, 2020, 2:53 PM IST
ಚತ್ತೀಸ್ ಗಢ್/ಬಿಜಾಪುರ್:ಹಲವಾರು ಮಂದಿಯ ಹತ್ಯೆಯ ಹಿಂದಿದ್ದ ಹಿರಿಯ ನಕ್ಸಲ್ ಮುಖಂಡನನ್ನು ಆತನ ಸಹಚರರೇ ಹತ್ಯೆಗೈದಿರುವ ಘಟನೆ ಚತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಶುಕ್ರವಾರ(ಅಕ್ಟೋಬರ್ 2, 2020) ನಡೆದಿರುವುದಾಗಿ ವರದಿ ತಿಳಿಸಿದೆ.
ಪೊಲೀಸರ ಪ್ರಕಾರ, ಈ ನಕ್ಸಲ್ ನಾಯಕನ ತಲೆಗೆ 8 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಅಲ್ಲದೇ ಗಂಗಾಲೂರು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಹತ್ಯೆಯಲ್ಲಿ ನಕ್ಸಲ್ ಮುಖಂಡ ಆರೋಪಿಯಾಗಿರುವುದಾಗಿ ತಿಳಿಸಿದೆ.
ನಕ್ಸಲ್ ಸಂಘಟನೆಯ ಡಿವಿಷನಲ್ ಕಮಿಟಿಯ ಸದಸ್ಯ ಮೋದಿಯಾಮ್ ವಿಜ್ಜಾ ನಕ್ಸಲ್ ಮುಖಂಡನನ್ನು ಆತನ ಸಹಚರರೇ ಹತ್ಯೆಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಚತ್ತೀಸ್ ಗಢದ ಬಸ್ತಾರ್ ರೇಂಜ್ ನ ಇನ್ಸ್ ಪೆಕ್ಟರ್ ಜನರಲ್ ಪೊಲೀಸ್ ಪಿ.ಸುಂದರ್ರಾಜ್ ತಿಳಿಸಿದ್ದಾರೆ.
ಇದನ್ನೂ ಓದಿ:“ಅವ್ನು ಬರ್ತಿದ್ದಾನೆ ಕಣ್ರೋ..”ಇಂದಿನಿಂದ ರಾಜಸ್ಥಾನ ರಾಯಲ್ಸ್ ತಂಡ ಸೇರಲಿರುವ ಬೆನ್ ಸ್ಟೋಕ್ಸ್
ಬಿಜಾಪುರ್ ಜಿಲ್ಲೆಯ ಬಸ್ತಾರ್ ಡಿವಿಷನ್ ಪ್ರದೇಶದಲ್ಲಿ ಹಲವಾರು ಜನರನ್ನು ಕೊಂದ ಘಟನೆಯ ಹಿಂದೆ ವಿಜ್ಜಾ ಕೈವಾಡವಿರುವುದಾಗಿ ಇನ್ಸ್ ಪೆಕ್ಟರ್ ಜನರಲ್ ವಿವರಿಸಿದ್ದಾರೆ. ಅಮಾಯಕ ಬುಡಕಟ್ಟು ಜನರ ಮೇಲಿನ ಹಿಂಸಾಚಾರ, ಹತ್ಯೆಯ ವಿಚಾರದಲ್ಲಿ ಸ್ಥಳೀಯ ನಕ್ಸಲೀಯರಿಗೂ, ಹಿರಿಯ ನಕ್ಸಲ್ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇದ್ದಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ