ಐವರು ನಕ್ಸಲರ ಹತ್ಯೆ
Team Udayavani, Nov 6, 2018, 6:00 AM IST
ಮಾಲ್ಕನ್ಗಿರಿ: ಒಡಿಶಾದ ಮಾಲ್ಕನ್ಗಿರಿ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಮಹಿಳೆ ಸೇರಿದಂತೆ ಐವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.
ಇಲ್ಲಿನ ಪಪೂÉರ್ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ಪಡೆಯು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಮಾವೋವಾದಿಗಳು ಕಣ್ಣಿಗೆ ಬಿದ್ದರು. ಯೋಧರನ್ನು ನೋಡುತ್ತಿದ್ದಂತೆ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸತೊಡಗಿದರು. ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು. ಪ್ರತಿದಾಳಿ ವೇಳೆ ಐವರು ನಕ್ಸಲರು ಮೃತಪಟ್ಟರು. ಇನ್ನೂ ಹೆಚ್ಚು ಸಾವು ನೋವು ಸಂಭವಿಸಿರುವ ಸಾಧ್ಯತೆಯೂ ಇದ್ದು, ಶೋಧ ಕಾರ್ಯ ಮುಂದುವರಿಸಿದ್ದೇವೆ ಎಂದು ಡಿಜಿಪಿ ಆರ್.ಪಿ. ಶರ್ಮಾ ತಿಳಿಸಿದ್ದಾರೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಎರಡು ಇನ್ಸಾಸ್ ರೈಫಲ್ಗಳು, ಒಂದು ಎಸ್ಎಲ್ಆರ್, ಒಂದು 303 ರೈಫಲ್ ಮತ್ತು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ನಡೆದ ವೇಳೆ ಮಾವೋವಾದಿ ನಾಯಕ ರಣದೇವ್ ಕೂಡ ಸ್ಥಳದಲ್ಲಿದ್ದ ಎಂಬ ಶಂಕೆಯಿದ್ದು, ಆತ ತಪ್ಪಿಸಿಕೊಂಡಿದ್ದಾನೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!