ನಕ್ಸಲ್ ಅಟ್ಟಹಾಸ; ಬಾಂಬ್ ಸ್ಫೋಟಕ್ಕೆ ಯೋಧ ಹುತಾತ್ಮ, 4 ನಾಗರಿಕರು ಬಲಿ
Team Udayavani, Nov 8, 2018, 2:22 PM IST
ಛತ್ತೀಸ್ ಗಢ್: ಬಸ್ ಅನ್ನು ಗುರಿಯಾಗಿರಿಸಿಕೊಂಡು ಸುಧಾರಿತ ಸ್ಫೋಟಕ ಬಳಸಿ ನಕ್ಸಲೀಯರು ನಡೆಸಿದ ದಾಳಿಯಲ್ಲಿ ಮೂವರು ನಾಗರಿಕರು, ಒಬ್ಬರು ಸಿಐಎಸ್ ಎಫ್(ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ನ ಯೋಧ ಹುತಾತ್ಮರಾಗಿರುವ ಘಟನೆ ದಾಂತೇವಾಡದಲ್ಲಿ ಗುರುವಾರ ನಡೆದಿದೆ.
ಪಿಟಿಐ ವರದಿ ಪ್ರಕಾರ, ದಾಂತೇವಾಡದಲ್ಲಿ ವಾಹನ ಗುರಿಯಾಗಿರಿಸಿಕೊಂಡು ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಒಬ್ಬರು ಯೋಧರು, ಬಸ್ ಚಾಲಕ, ಕಂಡಕ್ಟರ್, ಪ್ರಯಾಣಿಕ ಹಾಗೂ ಕ್ಲೀನರ್ ಸಾವನ್ನಪ್ಪಿರುವುದಾಗಿ ವಿವರಿಸಿದೆ. ಘಟನೆಯಲ್ಲಿ ಇಬ್ಬರು ಸಿಐಎಸ್ ಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಂತೇವಾಡ ಜಿಲ್ಲೆಯ ಗುಡ್ಡಗಾಡು ಪ್ರದೇಶವಾದ ಬಾಚೇಲಿ ಎಂಬಲ್ಲಿ ಸ್ಫೋಟ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಸಿಐಎಸ್ ಎಫ್ ಯೋಧರು ದಿನನಿತ್ಯದ ಅಡುಗೆ ಸಾಮಾನು ಖರೀದಿಸಿಕೊಂಡು ಬಸ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ನವೆಂಬರ್ 12 ಮತ್ತು 20ರಂದು ಒಟ್ಟು ಎರಡು ಹಂತದಲ್ಲಿ ಛತ್ತೀಸ್ ಗಢ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ವೇಳೆ ನಕ್ಸಲೀಯರ ಅಟ್ಟಹಾಸ ಮತ್ತೆ ಮುಂದುವರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ