ಮರಾಠ ಆಂದೋಲನ 2ನೇ ದಿನಕ್ಕೆ: ಮತ್ತೋರ್ವ ಪ್ರತಿಭಟನಕಾರ ಆತ್ಮಹತ್ಯೆ
Team Udayavani, Jul 25, 2018, 11:51 AM IST
ಮುಂಬಯಿ : ಇಂದು ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿರುವ ಮರಾಠ ಮೀಸಲಾತಿ ಚಳವಳಿ ರಾಜ್ಯಾದ್ಯಂತ ಇನ್ನಷ್ಟು ತೀವ್ರತೆಯನ್ನು ಕಂಡಿದೆ. ಇಂದು ಬೆಳಗ್ಗೆ ಮತ್ತೋರ್ವ ಪ್ರತಿಭಟನಕಾರ ಜಗನ್ನಾಥ ಸೋನವಾನೆ ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸೋನವಾನೆ ಸಾವನ್ನು ಅನುಸರಿಸಿ ಕೋಪೋದ್ರಿಕ್ತರಾಗಿರುವ ಪ್ರತಿಭಟನಕಾರರು ಮುಂಬಯಿಯಲ್ಲಿ ಮಾತ್ರವಲ್ಲದೆ ಇನ್ನೂ ಹಲವು ಕಡೆಗಳಲ್ಲಿ ರಸ್ತೆಗಳನ್ನು ಬ್ಲಾಕ್ ಮಾಡಿ ವಾಹನ ಸಂಚಾರವನ್ನು ತಡೆದಿದ್ದಾರೆ.
ಮೊನ್ನೆ ಸೋಮವಾರ ಮೀಸಲಾತಿ ಪ್ರತಿಭಟನಕಾರ ಕಾಕಾಸಾಹೇಬ್ ಶಿಂಧೆ ಔರಂಗಾಬಾದ್ ಸಮೀಪ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮರಾಠ ಸಮುದಾಯದವರು ತಮಗೆ ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಆಗ್ರಹಿಸಿ ಆಂದೋಲನ ನಡೆಸುತ್ತಿದ್ದಾರೆ.
ಆತ್ಮಾಹುತಿ ಮಾಡಿಕೊಂಡಿರುವ ಕಾಕಾಸಾಹೇಬ್ ಶಿಂಧೆ ಮತ್ತು ಜಗನ್ನಾಥ ಸೋನವಾನೆ ಅವರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದೂ ಮರಾಠ ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
ಮರಾಠ ಕ್ರಾಂತಿ ಸಮಾಜ ಇಂದು ಬುಧವಾರ ಶಾಂತಿಯುತ ಬಂದ್ ಗೆ ಕರೆ ನೀಡಿದೆ. ಪ್ರತಿಭಟನಕಾರರು ಮುಂಬಯಿ ಬಂದ್ ಗೆ ಕರೆ ನೀಡಿದ್ದಾರೆ.
ನಿನ್ನೆಯ ಆಂದೋಲನ ಹಿಂಸೆಗೆ ತಿರುಗಿದ ಪರಿಣಾಮವಾಗಿ ಕಲ್ಲೆಸೆತಕ್ಕೆ ಗುರಿಯಾಗಿ ಓರ್ವ ಕಾನ್ಸ್ಟೆಬಲ್ ಮೃತಪಟ್ಟು ಇತರ 9 ಮಂದಿ ಪೊಲೀಸರು ಗಾಯಗೊಂಡಿದ್ದರು. ಮೂವರು ಪ್ರತಿಭಟನಕಾರರು ಆತ್ಮಹತ್ಯೆಗೆ ಯತ್ನಿಸಿದ್ದರು. ಪೊಲೀಸ್ ಮತ್ತು ಇತರ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.
ಈ ನಡುವೆ ಔರಂಗಾಬಾದ್ ಜಿಲ್ಲೆಯಲ್ಲಿ ಗಾಳಿ ಸುದ್ದಿಯನ್ನು ತಡೆಯುವ ನಿಟ್ಟಿನಲ್ಲಿ ಇಂಟರ್ ನೆಟ್ ಸೇವೆಯನ್ನು ಅಮಾನತುಗೊಳಿಸಲಾಗಿದೆ. ಜಲ್ನಾ ದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡೆಸೆದು ಪ್ರತಿಭಟನಕಾರರನ್ನು ಚದುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!