Maratha reservation; ಹಿಂಸಾಚಾರ ವಿರುದ್ಧ ಕಠಿನ ಕ್ರಮಕ್ಕೆ ಸೂಚನೆ: ಅಜಿತ್ ಪವಾರ್
Team Udayavani, Sep 3, 2023, 7:00 PM IST
ಮುಂಬಯಿ: ಮರಾಠಾ ಮೀಸಲಾತಿಗೆ ಆಗ್ರಹಿಸಿ ಜಾಲಾ° ಜಿಲ್ಲೆಯ ಅಂಬಾಡ್ ತಾಲೂಕಿನ ಅಂತರವಾಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರಿಂದ ಲಾಠಿಚಾರ್ಚ್, ಅಶ್ರುವಾಯು ಪ್ರಯೋಗ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೂಚಿಸಲಾಗಿದೆ.
ರಾಜ್ಯದ ಕೆಲವೆಡೆ ಬಸ್ಗಳ ಮೇಲೆ ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆ ಮತ್ತು ಹಿಂಸಾಚಾರದ ಘಟನೆಗಳು ನಡೆಯುತ್ತಿದ್ದು, ಅವುಗಳನ್ನು ತತ್ಕ್ಷಣವೇ ನಿಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮರಾಠ ಸಮುದಾಯದ ಮುಖಂಡರೊಂದಿಗೆ ಚರ್ಚಿಸಲು ರಾಜ್ಯ ಸರಕಾರ ಸಿದ್ಧವಿದೆ. ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆ, ಹಿಂಸಾಚಾರದಲ್ಲಿ ನಮ್ಮದೇ ರಾಜ್ಯದ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಈ ಆಂದೋಲನದಿಂದ ನಾಗರಿಕರಿಗೆ ತೊಂದರೆಯಾಗುವ ಆತಂಕವಿದೆ. ಆದ್ದರಿಂದ ಕಲ್ಲು ತೂರಾಟ, ಬೆಂಕಿ ಹಚ್ಚುವ ಹಿಂಸಾಚಾರ ತಪ್ಪಿಸಬೇಕು. ಹಿಂಸಾಚಾರವನ್ನು ತಡೆಯಲು ಮರಾಠಾ ಸಮುದಾಯ, ಮುಖಂಡರು, ಕಾರ್ಯಕರ್ತರು, ಮರಾಠ ಸಂಘಟನೆಗಳ ಕಾರ್ಯಕರ್ತರು ಮುಂದಾಗಬೇಕು ಎಂದು ಮನವಿ ಮಾಡುತ್ತೇನೆ. ನಾವೆಲ್ಲರೂ ಸಹಕರಿಸಿ ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸೋಣ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್