ಕ್ರೂರಿ ಕೋವಿಡ್: ತಾಯಿ ಶವದ ಎದುರು ದಾಂಪತ್ಯ ಜೀವನಕ್ಕೆ ಕಾಲಿಡುವಂತಾಯಿತು ಪುತ್ರನ ಪರಿಸ್ಥಿತಿ
Team Udayavani, May 29, 2021, 12:52 PM IST
ತೆಲಂಗಾಣ: ಹೆತ್ತವರ ಆಶೀರ್ವಾದೊಂದಿಗೆ ಹೊಸ ಜೀವನಕ್ಕೆ ಕಾಲಿಡಬೇಕೆಂದು ವಿದೇಶದಿಂದ ಭಾರತಕ್ಕೆ ಬಂದಿದ್ದ ಮಗ,ತಾಯಿಯ ಶವ ಮುಂದಿಟ್ಟುಕೊಂಡು ಪತ್ನಿಯ ಕೊರಳಿಗೆ ತಾಳಿ ಕಟ್ಟಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಇಸ್ಮಾಯಿಲ್ ಖಾನ್ಪೇಟ್ನಲ್ಲಿ ಇಂತಹದ್ದೊಂದು ಕಣ್ಣೀರು ತರಿಸುವಂತಹ ಪ್ರಸಂಗ ಜರುಗಿದೆ.
ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಎಂಬಾತನಿಗೆ ಮೇ 21ರಂದು ಮದುವೆ ನಿಶ್ಚಯವಾಗಿದೆ. ಮದುವೆಗೆಂದು ಆತ ತನ್ನೂರಿಗೆ ಮರಳಿದ್ದ. ಆದರೆ ಇವರ ತಾಯಿ ಪಾಲ್ಪಾನೂರಿ ರೇಣುಕಾ (49) ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ರೇಣುಕಾ ಅವರ ಸಹೋದರನೂ ಕೂಡ ಕೋವಿಡ್ಗೆ ಬಲಿಯಾಗಿದ್ದರು. ಹೀಗಾಗಿ ರಾಕೇಶ್ ತನ್ನ ವಿವಾಹವನ್ನು ಮುಂದೂಡಿ, ಅಮ್ಮ ಗುಣಮುಖರಾಗಿ ಕ್ಷೇಮವಾಗಿ ಮನೆಗೆ ಬರಲೆಂದು ಕಾಯುತ್ತಿದ್ದ.
ಆದರೆ ತಾಯಿ ಅವರೂ ಕೂಡಾ ಕೋವಿಡ್ನಿಂದ ಸಾವನ್ನಪ್ಪಿದರು. ಬಳಿಕ ಆಯಂಬುಲೆನ್ಸ್ನಲ್ಲಿ ಆಸ್ಪತ್ರೆಯಿಂದ ಗ್ರಾಮಕ್ಕೆ ಮೃತದೇಹವನ್ನು ಕರೆತರಲಾಯಿತು.
ಈ ವೇಳೆ, ಅಮ್ಮನ ಮೃತದೇಹದ ಮುಂದೆಯೇ ಭಾರವಾದ ಮನಸ್ಸು, ದು:ಖದ ಮಡುವಿನಲ್ಲೇ ವರ ರಾಕೇಶ್ ಹಾಗೂ ವಧು ಪರಸ್ಪರ ಹಾರ ಬದಲಾಯಿಸಿಕೊಂಡರು. ಈ ಮೂಲಕ ತೀರಿಹೋದ ಅಮ್ಮನ ಶವದ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಂಥ ಮನಕಲಕುವ ಘಟನೆಗೆ ಸಾಕ್ಷಿಯಾಗಿ ಅಲ್ಲಿ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು