ಲೋಕಸಭೆಯಲ್ಲಿ ಸಂಸದರು, ಮಾರ್ಷಲ್ಸ್ ಗಳ ಘರ್ಷಣೆ; ಇಬ್ಬರು “ಕೈ” ಸಂಸದರು ಕಲಾಪದಿಂದ ಹೊರಕ್ಕೆ
Team Udayavani, Nov 25, 2019, 3:10 PM IST
ನವದೆಹಲಿ: ಮಹಾರಾಷ್ಟ್ರದಲ್ಲಿನ ರಾಜಕೀಯ ಅಸ್ಥಿರತೆ ಬಗ್ಗೆ ಕಾಂಗ್ರೆಸ್ ಸೋಮವಾರ ಲೋಕಸಭೆ ಕಲಾಪದ ವೇಳೆ ತೀವ್ರ ಗದ್ದಲ, ಕೋಲಾಹಲ ನಡೆಸಿದ ಪರಿಣಾಮ ಇಬ್ಬರು ಕಾಂಗ್ರೆಸ್ ಸಂಸದರನ್ನು ಸದನದಿಂದ ಬಲವಂತವಾಗಿ ಹೊರಹಾಕಿದ ಘಟನೆ ನಡೆದಿದೆ.
ಸದನದೊಳಗೆ ಅಶಿಸ್ತಿನಿಂದ ವರ್ತಿಸಿದ್ದ ಇಬ್ಬರು ಸಂಸದರನ್ನು ಹೊರಕಳುಹಿಸಬೇಕೆಂದು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ರವಿ ಶಂಕರ್ ಪ್ರಸಾದ್ ಮತ್ತು ಪ್ರಹ್ಲಾದ್ ಜೋಶಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಲೋಕಸಭೆಯ ಶಿಷ್ಟಾಚಾರವನ್ನು ಎಲ್ಲಾ ಪಕ್ಷಗಳು ಕಾಪಾಡಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿರುವುದಾಗಿ ವರದಿ ತಿಳಿಸಿದೆ.
ಮಾರ್ಷಲ್ ಗಳ ಜತೆ ಜಟಾಪಟಿ:
ಲೋಕಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸಂಸದರ ಗುಂಪೊಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿವೆ. ಅಲ್ಲದೇ ಸ್ಪೀಕರ್ ಬಿರ್ಲಾ ಅವರ ಸಮೀಪ ತೆರಳಿ ಬ್ಯಾನರ್ ಹಿಡಿದು ಘೋಷಣೆ ಕೂಗಿದ್ದರು. ಮಹಾರಾಷ್ಟ್ರದಲ್ಲಿನ ಪ್ರಜಾಪ್ರಭುತ್ವದ ಕೊಲೆಯನ್ನು ನಿಲ್ಲಿಸಿ. ಏತನ್ಮಧ್ಯೆ ಗದ್ದಲ ಎಬ್ಬಿಸದೇ, ಶಾಂತಿ ಕಾಪಾಡಿ ಎಂದು ಸ್ಪೀಕರ್ ಬಿರ್ಲಾ ಮನವಿ ಮಾಡಿಕೊಂಡಿದ್ದರು.
ನಂತರ ಟಿಎನ್ ಪ್ರತಾಪನ್ ಮತ್ತು ಹಿಬಿ ಎಡನ್ ಹಿಡಿದುಕೊಂಡಿದ್ದ ಬ್ಯಾನರ್ ಅನ್ನು ತೆಗೆದುಹಾಕುವಂತೆ ಸ್ಪೀಕರ್ ನಿರ್ದೇಶನ ನೀಡಿದ್ದರು. ಆದರೆ ಕಾಂಗ್ರೆಸ್ ಸಂಸದರು ಸೂಚನೆ ನಿರಾಕರಿಸಿ ಪ್ರತಿಭಟನೆ ಮುಂದುವರಿಸಿದ್ದರು. ಈ ಸಂದರ್ಭದಲ್ಲಿ ಲೋಕಸಭೆ ಮಾರ್ಷಲ್ಸ್ ಗಳ ಜತೆ ಕಾಂಗ್ರೆಸ್ ಸಂಸದರು ಕೈ ಮಿಲಾಯಿಸಿದ ಘಟನೆ ನಡೆಯಿತು.
ಕಲಾಪದಿಂದ ಇಬ್ಬರು ಸಂಸದರನ್ನು ಮಾರ್ಷಲ್ಸ್ ಗಳು ಬಲವಂತವಾಗಿ ಹೊರ ಹಾಕಲು ಮುಂದಾಗಿದ್ದು, ನಮ್ಮ ಕೈಯಲ್ಲಿದ್ದ ಬ್ಯಾನರ್ ಗಳನ್ನು ಕಿತ್ತೊಗೆಯಲು ಪ್ರಯತ್ನಿಸಿದ್ದರು. ಇದರ ಬಗ್ಗೆ ನಮ್ಮ ವಿರೋಧ ವ್ಯಕ್ತಪಡಿಸಿದ್ದವೇವು. ಮಹಿಳಾ ಸಂಸದರನ್ನು ದೂಡಿದ್ದರು. ಹೀಗಾಗಿ ನಾವು ಸ್ಪೀಕರ್ ವಿರುದ್ಧ ದೂರು ನೀಡಿದ್ದೇವೆ ಎಂದು ಎಡೆನ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ