ಎನ್ಜಿಒಗಳ ವಿರುದ್ಧ ಸಾಮೂಹಿಕ ಚಳವಳಿ ನಡೆಯಲಿ: ಗೋಯಲ್
Team Udayavani, Oct 21, 2019, 5:22 AM IST
ಪಣಜಿ: ಭಾರತದ ಬಡಜನರ ಅಭಿವೃದ್ಧಿಗೆ ತೊಡಕಾಗಿರುವಂಥ ಎನ್ಜಿಒ (ಸರ್ಕಾರೇತರ ಸಂಸ್ಥೆಗಳು)ಗಳ ವಿರುದ್ಧ ಸಾಮೂಹಿಕ ಚಳವಳಿ ನಡೆಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಕರೆ ನೀಡಿದ್ದಾರೆ.
ಪಣಜಿಯಲ್ಲಿ ನಡೆದ “ವೈಬ್ರೆಂಟ್ ಗೋವಾ’ ಹೂಡಿಕೆ ಶೃಂಗದಲ್ಲಿ ಭಾನುವಾರ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳ ವಿರುದ್ಧ ಪ್ರತಿಭಟನೆ ನಡೆಸುವಂಥ ಎನ್ಜಿಒಗಳು ದೇಶದ ಬಡ ಜನರ ಅಭಿವೃದ್ಧಿಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಅಡ್ಡಿಯಾಗುತ್ತಿವೆ. ಅಭಿವೃದ್ಧಿ ಯೋಜನೆ ಗಳಿಗೆ ತೊಂದರೆ ಮಾಡುವುದನ್ನು ನಿಲ್ಲಿಸಿ ಎಂದು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ.
ಪ್ರಗತಿ ಬಯಸದ ಎನ್ಜಿಒಗಳು ಇಂಥ ಕೃತ್ಯವೆಸಗುತ್ತಿದ್ದು, ಅವುಗಳ ವಿರುದ್ಧ ದೊಡ್ಡ ಜನಾಂದೋಲನ ನಡೆಯಬೇಕು ಎಂದಿದ್ದಾರೆ. ಉತ್ತರ ಗೋವಾದ ಮೋಪಾದಲ್ಲಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ವಿರೋಧಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾ ಗೋಯಲ್ ಈ ಮಾತುಗಳನ್ನು ಹೇಳಿದ್ದಾರೆ. ಗೋವಾದಲ್ಲಿ ಅಭಿವೃದ್ಧಿಯಾಗ ಬಾರದು, ಒಳ್ಳೆಯ ರಸ್ತೆ , ಏರ್ಪೋರ್ಟ್, ಹೋಟೆಲ್ ಬರಬಾರದು ಎಂಬ ದುರು ದ್ದೇಶದಿಂದ ಕೆಲವರು ಈ ರೀತಿಯ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!