ಮಹಾರಾಷ್ಟ್ರ: ಥಾಣೆ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, ನಾಲ್ವರು ರೋಗಿಗಳು ಸಾವು
ಸಾವನ್ನಪ್ಪಿರುವ ಕುಟುಂಬ ಸದಸ್ಯರಿಗೆ ತಲಾ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ
Team Udayavani, Apr 28, 2021, 9:02 AM IST
ಮುಂಬಯಿ: ಇಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿಅನಾಹುತಕ್ಕೆ ಹಿರಿಯ ವ್ಯಕ್ತಿಯೊಬ್ಬರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ನಗರದಲ್ಲಿ ಬುಧವಾರ(ಏಪ್ರಿಲ್ 28) ಬೆಳಗ್ಗೆ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅಸ್ಸಾಂನಲ್ಲಿ 6.4 ತೀವ್ರತೆಯ ಭಾರೀ ಭೂಕಂಪ, ಜನರಲ್ಲಿ ಆತಂಕ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಾಸ್ಮೀನ್ ಝಡ್ (46), ನವಾಬ್ ಎಂ,ಶೇಖ್ (47), ಹಲೀಮಾ ಬಿ.ಸಲ್ಮಾನಿ(70) ಸೇರಿದಂತೆ ನಾಲ್ವರು ಸಾವಿಗೀಡಾಗಿರುವುದಾಗಿ ಥಾಣೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ವಿವಿಧ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.
ಮಹಾರಾಷ್ಟ್ರದ ವಸತಿ ಸಚಿವ ಡಾ.ಜಿತೇಂದ್ರ ಅವ್ಹಾದ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಈ ಬಗ್ಗೆ ಪೊಲೀಸರು ಮತ್ತು ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ಶೀಘ್ರವೇ ವಿವರ ನೀಡಲಿದ್ದಾರೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
Today at around 03:40 am fire broke out at Prime Criticare Hospital in Mumbra, Thane. Two fire engines & one rescue vehicle are at the spot. Fire extinguishing underway. Four dead during shifting of patients to another hospital: Thane Municipal Corporation#Maharashtra pic.twitter.com/QR4NNYZd8Y
— ANI (@ANI) April 28, 2021
ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿರುವ ಕುಟುಂಬ ಸದಸ್ಯರಿಗೆ ತಲಾ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ