ಅಸ್ಸಾಂನಲ್ಲಿ  ಭಾರೀ ಮಳೆ: ನೆರೆಯಬ್ಬರಕ್ಕೆ 91 ಪ್ರಾಣಿಗಳು ಬಲಿ


Team Udayavani, Aug 1, 2017, 9:31 AM IST

01-PTI-10.jpg

ಹೊಸದಿಲ್ಲಿ: ಇತ್ತ ದಕ್ಷಿಣ ಭಾರತದಲ್ಲಿ ಈ ಬಾರಿಯೂ ಬರಗಾಲದ ಛಾಯೆ ಆವರಿಸಿದ್ದರೆ, ಅಸ್ಸಾಂ, ಗುಜರಾತ್‌ನಂಥ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹವು ಜನಜೀವನವನ್ನು ತತ್ತರಿಸುವಂತೆ ಮಾಡಿದೆ. ಈಶಾನ್ಯ ರಾಜ್ಯದಲ್ಲಿ ಪ್ರಸಕ್ತ ವರ್ಷ ಮಳೆಯಿಂದಾಗಿ ಸುಮಾರು 70 ಮಂದಿ ಸಾವಿಗೀ ಡಾಗಿ ದ್ದಾರೆ. ಅಷ್ಟೇ ಅಲ್ಲ, ಅಸ್ಸಾಂನ ಕಾಜಿರಂಗಾ ರಾಷ್ಟ್ರೀಯ ಉದ್ಯಾನ ವನ ದಲ್ಲಿದ್ದ 90ಕ್ಕೂ ಹೆಚ್ಚು ಪ್ರಾಣಿಗಳು ವರುಣನ ಅಬ್ಬರಕ್ಕೆ ಬಲಿಯಾಗಿವೆ.

ಕೇಂದ್ರ ಪರಿಸರ ಸಚಿವ ಹರ್ಷವರ್ಧನ್‌ ಅವರೇ ಲೋಕಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಯೊಂದಕ್ಕೆ ಲಿಖೀತ ಉತ್ತರ ನೀಡಿದ ಹರ್ಷವರ್ಧನ್‌, “ಮಳೆ, ಪ್ರವಾಹದಿಂದಾಗಿ 7 ಘೇಂಡಾಮೃಗಗಳು, 84 ಜಿಂಕೆಗಳು ಸಾವಿಗೀಡಾಗಿವೆ. ಅಸ್ಸಾಂನ 29 ಜಿಲ್ಲೆಗಳಲ್ಲಿನ 25 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಡಳಿತವು ಇಲ್ಲಿ 1,098 ಪರಿಹಾರ ಶಿಬಿರಗಳನ್ನು ನಿರ್ಮಿಸಿದ್ದು, ಜನರಿಗೆ ತೊಂದರೆ ಯಾಗ  ದಂತೆ ಕ್ರಮ ಕೈಗೊಳ್ಳುತ್ತಿದೆ,’ ಎಂದು ಹೇಳಿದ್ದಾರೆ.

2 ಲಕ್ಷ ಪರಿಹಾರ ಘೋಷಣೆ: ಅಸ್ಸಾಂ ಮತ್ತು ರಾಜಸ್ಥಾನದಲ್ಲಿ ಮಳೆ, ಪ್ರವಾಹದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಂಭೀರ ಗಾಯ ಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿಯೂ ಹೇಳಿದ್ದಾರೆ.  

ಇಂದು ಪ್ರಧಾನಿ ಭೇಟಿ
ಪ್ರವಾಹಪೀಡಿತ ಅಸ್ಸಾಂಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ ಪ್ರವಾಹದಿಂದಾಗುವ ಸಮಸ್ಯೆಗಳ ಕುರಿತು ಚರ್ಚಿಸಿ, ಅದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಚಿವರ ಸಮಿತಿ ಮತ್ತು ರಾಜ್ಯದ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಅಸ್ಸಾಂನ ಹಣಕಾಸು ಸಚಿವ ಹಿಮಾಂತ ಬಿಸ್ವಾ ಸರ್ಮಾ ಹೇಳಿದ್ದಾರೆ. 

13 ಗಂಟೆ ಬಳಿಕ ಪ್ರವಾಹದಲ್ಲಿ ಸಿಲುಕಿದ್ದ ವೃದ್ಧೆಯ ರಕ್ಷಣೆ
ಪಶ್ಚಿಮ ಬಂಗಾಳದ ದಾಮೋದರ ನದಿಯಲ್ಲಿ ಕೊಚ್ಚಿ ಹೋಗಿದ್ದ 62 ವರ್ಷದ ತಪಥಿ ಚೌಧರಿ ಎಂಬ ಮಹಿಳೆಯನ್ನು ಭಾನುವಾರ ರಕ್ಷಿಸಲಾಗಿದೆ. 13 ಗಂಟೆಗಳ ಕಾಲ ತಪಥಿ ನೀರಲ್ಲಿದ್ದರೂ, ಸಾವಿನ ಜತೆ ಹೋರಾಡಿ ಗೆದ್ದಿದ್ದಾರೆ. ಶನಿವಾರ ಸಂಜೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಅವರನ್ನು 13 ಗಂಟೆಗಳ ಬಳಿಕ ಅಂದರೆ ಭಾನುವಾರ ಬೆಳಗ್ಗೆ 80 ಕಿ.ಮೀ. ದೂರದಲ್ಲಿ ಮೀನುಗಾರರು ರಕ್ಷಿಸಿದ್ದಾರೆ.

ದೇಶದ ಪ್ರವಾಹ ಪೀಡಿತ ಪ್ರದೇಶ ಗಳು, ಸಂಕಷ್ಟದಲ್ಲಿರುವ ಜನರ ಬಗ್ಗೆ ಸರಕಾರಕ್ಕೆ ಸೂಕ್ಷ್ಮ ಸಂವೇದನೆಯೇ ಇಲ್ಲ. ಸಚಿವರೆಲ್ಲ ಬೇರೆ ಪಕ್ಷಗಳ ಶಾಸಕ ರನ್ನು ಪಕ್ಷಾಂತರ ಮಾಡಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಅವರಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಬೇಕೆಂಬ ಕನಿಷ್ಠ ಕಾಳಜಿಯೂ ಇಲ್ಲ.
ಗುಲಾಂ ನಬಿ ಆಜಾದ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.