- Friday 06 Dec 2019
ಖ್ಯಾತ ಗಣಿತಜ್ಞ ವಸಿಷ್ಠ ನಾರಾಯಣ್ ಸಿಂಗ್ ಇನ್ನಿಲ್ಲ
Team Udayavani, Nov 15, 2019, 12:18 AM IST
ಪಾಟ್ನಾ: ಖ್ಯಾತ ಭೌತವಿಜ್ಞಾನಿ ಐನ್ಸ್ಟೀನ್ರ ಸಾಪೇಕ್ಷ ಸಿದ್ಧಾಂತವನ್ನು ಪ್ರಶ್ನಿಸಿದ್ದ ಭಾರತದ ಹಿರಿಯ ಗಣಿತಜ್ಞ ವಸಿಷ್ಠ ನಾರಾಯಣ್ ಸಿಂಗ್ (77) ಗುರುವಾರ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು. ನಿಧನ ಹೊಂದಿದ ಗಣಿತಜ್ಞನಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಆ್ಯಂಬುಲೆನ್ಸ್ ಒದಗಿಸಲಿಲ್ಲ ಎಂದು ಕುಟುಂಬ ವರ್ಗ ಆರೋಪಿಸಿದೆ.
2 ಗಂಟೆಗಳ ಕಾಲ ಮೃತದೇಹವನ್ನು ಆಸ್ಪತ್ರೆಯ ಹೊರಗೆ ಇರಿಸಿ ಆ್ಯಂಬುಲೆನ್ಸ್ಗಾಗಿ ಕಾದೆವು. ಆದರೆ ಆಸ್ಪತ್ರೆ ಆಡಳಿತ ವರ್ಗ ನಮ್ಮ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದು ದೂರಿದೆ. ನಾರಾಯಣ್ ಸಿಂಗ್ 40 ವರ್ಷಗಳಿಂದ ಸ್ಕಿಝೋಫ್ರೇನಿಯಾ ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿಯೇ ಕೊನೆಯುಸಿರೆಳೆದರು.
ಇವರು ಐಐಟಿ-ಕಾನ್ಪುರ, ಕೋಲ್ಕತ್ತಾದ ಇಂಡಿಯನ್ ಸ್ಟಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ಮುಂತಾದ ಪ್ರತಿಷ್ಠಿತ ವಿವಿಗಳಲ್ಲಿ ಗಣಿತ ಬೋಧನೆ ಮಾಡಿದ್ದಾರೆ. ಇವರ ಸಾವಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ತೆಲಂಗಾಣ/ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ವಿಶ್ವನಾಥ ಸಜ್ಜನರ್ ನೇತೃತ್ವದ...
-
ನಾಗಪುರ: ಬಹುಕೋಟಿ ರೂ.ಗಳ ವಿದರ್ಭ ನೀರಾವರಿ ಹಗರಣದಲ್ಲಿ ಎನ್ಸಿಪಿ ಮುಖಂಡ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರದ ಭ್ರಷ್ಟಾಚಾರ...
-
ಸೈಬರಾಬಾದ್/ತೆಲಂಗಾಣ: ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿಹಚ್ಚಿ ಸುಟ್ಟು ಹಾಕಿರುವ ಪ್ರಕರಣದ ನಾಲ್ವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್...
-
ನವದೆಹಲಿ: ದಿಶಾ ಅತ್ಯಾಚಾರ ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದ ಘಟನೆ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿರುವ ನಡುವೆಯೇ ಪೋಸ್ಕೋ...
-
ಹೈದರಾಬಾದ್/ನವದೆಹಲಿ: ಪಶುವೈದ್ಯೆ ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ನಾಲ್ವರು ಆರೋಪಿಗಳನ್ನು...
ಹೊಸ ಸೇರ್ಪಡೆ
-
ಮುಂಬಯಿ, ಡಿ. 4: ಹೊರನಾಡ ಕನ್ನಡ ಸಂಘಟನೆಗಳಲ್ಲಿ ಹಿರಿಯರ ದಂಡೇ ಹೆಚ್ಚಾಗಿರುವಾಗ ಯುವಕ-ಯುವತಿಯರೇ ತುಂಬಿದ ಪಲವಾ ಕನ್ನಡಿಗರ ಸಂಘ ಯುವ ಪಡೆಯ ಕನ್ನಡಾಭಿಮಾನವನ್ನು...
-
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ....
-
ತೆಲಂಗಾಣ/ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ವಿಶ್ವನಾಥ ಸಜ್ಜನರ್ ನೇತೃತ್ವದ...
-
ಚಿಕ್ಕನಾಯಕನಹಳ್ಳಿ: ತಾಲೂಕಿನ ಮಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಪಾಳ್ಯದ ಪ್ರಾಥಮಿಕ ಶಾಲೆಯ ಛಾವಣಿ ಹಾಗೂ ಕಂಬ ಕುಸಿದು ಬಿದ್ದಿದ್ದು, ಅದೃಷ್ಟವಶಾತ್...
-
ಚಿತ್ರದುರ್ಗ: ಹೆಣ್ಣುಮಗು ಬೇಡ ಎನ್ನುವ ಭಾವನೆ ಇಂದು ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುವಂತೆ ಮಾಡಿದೆ. ಇದರಿಂದ ಇಂದು ವಧುವಿಗಾಗಿ ಹುಡುಕಾಡುವ ಸ್ಥಿತಿ ನಿರ್ಮಾಣವಾಗಿದೆ...