ಮಸೀದಿಯೊಳಗೆ ಹನುಮಾನ್ ಚಾಲೀಸ ಪಠಣಕ್ಕೆ ಕರೆ: ಮಥುರಾದಲ್ಲಿ 144 ಸೆಕ್ಷನ್ ಜಾರಿ; ಬಿಗಿ ಭದ್ರತೆ
Team Udayavani, Dec 6, 2022, 10:51 AM IST
ಉತ್ತರ ಪ್ರದೇಶ: ಮಸೀದಿಯೊಳಗೆ ಹನುಮಾನ್ ಚಾಲೀಸ ಪಠಿಸುತ್ತೇವೆ ಎಂದು ಹಿಂದೂ ಮಹಾಸಭಾ ಕರೆಕೊಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಥುರಾದಲ್ಲಿ ಮಂಗಳವಾರ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ.
ಸುಮಾರು 1,500 ಪೊಲೀಸರು, ಸಶಸ್ತ್ರ ಪೊಲೀಸ್ ಪಡೆ ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಜನ್ಮಸ್ಥಾನದ ದೇವಸ್ಥಾನ,ಶಾಹಿ ಮಸೀದಿ ಈದ್ಗಾ ಬಳಿ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ಹೇಳಿದ್ದಾರೆ.
ಸೋಮವಾರ, ಅಖಿಲ ಭಾರತ ಹಿಂದೂ ಮಹಾಸಭಾದ ದಿನೇಶ್ ಕೌಶಿಕ್, ಮಸೀದಿಯೊಳಗೆ ಹನುಮಾನ್ ಚಾಲೀಸಾವನ್ನು ಪಠಿಸುತ್ತೇವೆ ಎಂದು ಕರೆ ನೀಡಿದ್ದರು. ಈ ಕಾರಣದಿಂದ ಯಾವುದೇ ಅನಾಹುತ ಸಂಭವಿಸಬಾರದು, ಕೋಮುಗಲಭೆಗೆ ಕಾರಣವಾಗಬಾರದೆನ್ನುವ ನಿಟ್ಟಿನಲ್ಲಿ ಮಥುರಾದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.
ಸೆಕ್ಷನ್ 144 ನ್ನು ಜಾರಿಗೊಳಿಸಲಾಗಿದ್ದು, ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಕಳೆದ ವರ್ಷವೂ ಹಿಂದೂ ಮಹಸಭಾ ಇಂಥದ್ದೇ ಕರೆಯನ್ನು ನೀಡಿತ್ತು. ಆ ಯೋಜನೆಯನ್ನು ಕೂಡ ಜಿಲ್ಲಾಡಳಿತ ವಿಫಲವಾಗಿಸಿತ್ತು.
Uttar Pradesh | Police barricading placed at various places in Mathura this morning & vehicle checking being done by them in wake of a call given by Akhil Bharat Hindu Mahasabha to recite Hanuman Chalisa at Shri Krishna Janmabhoomi complex-Shahi Idgah Masjid maidan here today. pic.twitter.com/LvDK1uy8UJ
— ANI UP/Uttarakhand (@ANINewsUP) December 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…