ನೇಪಾಲದ ವಾದ ಒಪ್ಪಲಾಗದು: ಭಾರತ ಸ್ಪಷ್ಟನೆ
Team Udayavani, May 23, 2020, 9:00 AM IST
ವಿದೇಶಾಂಗ ಸಚಿವಾಲಯ ವಕ್ತಾರ ಅನುರಾಗ್ ಶ್ರೀವಾಸ್ತವ್.
ಹೊಸದಿಲ್ಲಿ: ಭಾರತದ 3 ಪ್ರಮುಖ ಭೂ ಪ್ರದೇಶಗಳನ್ನೊಳಗೊಂಡ ನೇಪಾಲದ ವಿವಾದಿತ ಹೊಸ ನಕ್ಷೆ ಕೇವಲ ಕೃತಕ ವಿಸ್ತರಣೆ.
ಇದನ್ನು ಭಾರತ ಒಪ್ಪಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ಅನುರಾಗ್ ಶ್ರೀವಾಸ್ತವ್ ಸ್ಪಷ್ಟಪಡಿಸಿದ್ದಾರೆ.
ನೇಪಾಲದ ಏಕಪಕ್ಷೀಯ ನಿರ್ಧಾರ, ಐತಿಹಾಸಿಕ ಸಂಗತಿ ಮತ್ತು ಪುರಾವೆಗಳನ್ನು ಆಧರಿಸಿಲ್ಲ. ಮಾತುಕತೆ ಮೂಲಕ ಬಗೆಹರಿಸಬಹುದಾಗಿದ್ದ ಸಮಸ್ಯೆ ಈಗ ದ್ವಿಪಕ್ಷೀಯ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಿಂತಿದೆ ಎಂದು ಅಸಮಾಧಾನ ಸೂಚಿಸಿದ್ದಾರೆ.
ನ್ಯಾಯ ಸಮ್ಮತವಲ್ಲದ ನಕ್ಷೆ ಪ್ರತಿಪಾದನೆಯಿಂದ ನಾವು ದೂರ ಇರಲು ಬಯಸುತ್ತೇವೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕತೆಯನ್ನು ಗೌರವಿಸುವಂತೆ ನೇಪಾಲವನ್ನು ಕೋರುತ್ತೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ