ದೇಶಾದ್ಯಂತ ಮೇ 21ರಂದು “ಉಗ್ರ ನಿಗ್ರಹ ದಿನ’ ಆಚರಣೆಗೆ ಸೂಚನೆ
Team Udayavani, May 14, 2022, 8:01 PM IST
ನವದೆಹಲಿ:ದೇಶಾದ್ಯಂತ ಮೇ 21 ಅನ್ನು “ಭಯೋತ್ಪಾದನೆ ನಿಗ್ರಹ ದಿನ’ವಾಗಿ ಆಚರಿಸುವಂತೆ ಸೂಚಿಸಿ ಎಲ್ಲ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರ ಸರ್ಕಾರಿ ಇಲಾಖೆಗಳು ಹಾಗೂ ಸಚಿವಾಲಯಗಳಿಗೆ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದೆ.
ಈ ನಿಟ್ಟಿನಲ್ಲಿ “ತುರ್ತು ಕ್ರಮ’ ಕೈಗೊಳ್ಳುವಂತೆಯೂ ಪತ್ರದಲ್ಲಿ ಸೂಚಿಸಲಾಗಿದೆ. “ಪ್ರತಿ ವರ್ಷ ಮೇ 21 ಅನ್ನು ಭಯೋತ್ಪಾದನೆ ನಿಗ್ರಹ ದಿನವಾಗಿ ಆಚರಿಸಬೇಕು. ಉಗ್ರವಾದವು ಹೇಗೆ ಜನಸಾಮಾನ್ಯರನ್ನು ಸಂಕಷ್ಟಕ್ಕೆ ನೂಕಿದೆ ಎಂಬುದನ್ನು ತೋರಿಸುವ ಮೂಲಕ ದೇಶದ ಯುವಕರನ್ನು ಉಗ್ರವಾದದಿಂದ, ಹಿಂಸಾಚಾರದಿಂದ ದೂರವಿಡುವಂತೆ ನೋಡಿಕೊಳ್ಳುವುದೇ ಈ ದಿನದ ಆಚರಣೆಯ ಉದ್ದೇಶವಾಗಿದೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಆ ದಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಇತರೆ ಸಾರ್ವಜನಿಕ ಸಂಸ್ಥೆಗಳಲ್ಲಿ ಉಗ್ರ ನಿಗ್ರಹ ಶಪಥವನ್ನು ಕೈಗೊಳ್ಳಬೇಕು. ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕವೂ ಭಯೋತ್ಪಾದನೆ ನಿರ್ಮೂಲನೆಯ ಸಂದೇಶಗಳನ್ನು ರವಾನಿಸಬೇಕು ಎಂದೂ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ